ಚಿರು, ಎನ್ಟಿಆರ್ ಚಿತ್ರಗಳ ಪ್ರಸಾರ ಬ್ರೇಕ್ ಗೆ ಕೈ ಕಸರತ್ತು
ಹೈದರಾಬಾದ್, ಮಾ. 19 : ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚಿರಂಜೀವಿ ಸೇರಿದಂತೆ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ನಟರ ಚಿತ್ರಗಳನ್ನು ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪ್ರಸಾರ ಮಾಡದಂತೆರ್ ಸೂಚನೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಆಯೋಗಕ್ಕೆ ಮನವಿ ಮಾಡಿಕೊಂಡಿದೆ.
ಪ್ರಜಾರಾಜ್ಯಂ ಪಕ್ಷ ಮುಖಂಡ ಚಿರಂಜೀವಿ, ಇವರ ಸಹೋದರ ಪವನ್ ಕಲ್ಯಾಣ್ , ನಾಗಬಾಬು, ಅಲ್ಲದೆ, ತೆಲುಗು ದೇಶಂ ಪಕ್ಷದ ಎನ್ ಬಾಲಕೃಷ್ಣ, ಹಾಗೂ ಜ್ಯೂನಿಯರ್ ಎನ್ ಟಿ ಆರ್ ಅವರ ಚಿತ್ರಗಳನ್ನು ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಪ್ರಸಾರ ಮಾಡುವುದನ್ನು ತಡೆಯಬೇಕು. ಚಿತ್ರಗಳ ಪ್ರಸಾರದಿಂದ ಮತ ಗಳಿಸಲು ಅನುಕೂಲವಾಗಲಿದೆ. ಆದ್ದರಿಂದ ಕೂಡಲೇ ಇದಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡ ಕೆ ರೋಸಯ್ಯ ಆಯೋಗವನ್ನು ಒತ್ತಾಯಿಸಿದ್ದಾರೆ.
ಕೆಲ ಕಿರುತೆರೆಗಳು ನಟರ ಚಿತ್ರಗಳ ಪ್ರಸಾರಕ್ಕೆ ಹೆಚ್ಚು ಮುತುವರ್ಜಿ ವಹಿಸಿವೆ. ಅಲ್ಲದೇ ಈ ನಟರಿಗೆ ಅಪಾರ ಅಭಿಮಾನಿ ಬಳಗ ಇರುವುದರಿಂದ ಮತದಾರರ ಒಲೈಕೆಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ಕೂಡಲೇ ಈ ನಟರ ಚಿತ್ರಗಳ ಪ್ರಸಾರವನ್ನು ನಿಷೇಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications