ಅನಂತ್ ವಿರುದ್ಧ ಎಚ್ಡಿಕೆ ಸ್ಪರ್ಧೆ ಸಂಭವ?
ಬೆಂಗಳೂರು, ಮಾ. 19 : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸ್ಪರ್ಧಿಸದಿದ್ದರೆ, ಬೆಂಗಳೂರು ದಕ್ಷಿಣದಿಂದ ಅನಂತಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.
ಕ್ಷೇತ್ರ ಪುನರ್ ವಿಂಗಡಣೆ ನಂತರ ಮಲ್ಲೇಶ್ವರಂ, ರಾಜಾಜಿನಗರ, ಬೊಮ್ಮನಹಳ್ಳಿ ಮತ್ತು ಬಿಟಿಎಂ ಲೇಔಟ್ ಗಳು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಸೇರಿವೆ. ಜಾತಿ ಲೆಕ್ಕಾಚಾರದಲ್ಲಿ ಗೌಡ ಮತಗಳು ಈ ಕ್ಷೇತ್ರದಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಮತಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಬೇಕು ಎನ್ನುವುದು ಜೆಡಿಎಸ್ ಲೆಕ್ಕಾಚಾರವಾಗಿದೆ. ಎಸ್ ಎಂ ಕೃಷ್ಣ ಅಖಾಡಕ್ಕೆ ಇಳಿಯದಿದ್ದರೆ, ತಾವು ಸ್ಪರ್ಧಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.
ಬೆಂಗಳೂರು ದಕ್ಷಿಣದಲ್ಲಿ ಗೌಡ, ಹಿಂದುಳಿದವರು, ಮುಸ್ಲಿಂ ಜನಾಂಗ ಬಹುಸಂಖ್ಯೆಯಲ್ಲಿದ್ದಾರೆ. ಕೃಷ್ಣ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು, ರಾಜ್ಯಸಭೆ ಸದಸ್ಯತ್ವದ ಅವಧಿ ಇನ್ನೂ ಐದೂವರೆ ವರ್ಷ ಇದೆ. ನನಗ್ಯಾಕೆ ಸ್ಪರ್ಧೆಯ ಉಸಾಬರಿ ಎನ್ನುವುದು ಕೃಷ್ಣ ಅವರ ಅಳಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications