ತೃತೀಯರಂಗ ಸರ್ಕಾರಕ್ಕೆ ಕೈ ಬೆಂಬಲ ಕೋರಿಕೆ, ಕಾರಟ್
ನವದೆಹಲಿ, ಮಾ. 19 : ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯಪಿಎ ಸರ್ಕಾರದೊಂದಿಗೆ ಮುನಿಸಿಕೊಂಡು ಬೆಂಬಲ ವಾಪಸ್ಸು ತೆಗೆದುಕೊಂಡಿದ್ದ ಎಡಪಕ್ಷಗಳ ಇದೀಗ ಮತ್ತೆ ಕಾಂಗ್ರೆಸ್ ಹಾಗೂ ಅದರ ಅಂಗ ಪಕ್ಷಗಳ ಕಡೆಗೆ ಮುಖಮಾಡತೊಡಗಿವೆ. ತೃತೀಯ ರಂಗ ಸರ್ಕಾರಕ್ಕೆ ಅಗತ್ಯ ಬಿದ್ದರೆ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷದ ಬೆಂಬಲವನ್ನು ಕೋರುತ್ತೇವೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದ್ದಾರೆ.
ಎನ್ ಡಿಎ ಹಾಗೂ ಯಪಿಎಯೇತರ ಸರ್ಕಾರಗಳ ರಚನೆಗೆ ಬೇರೆ ಜಾತ್ಯಾತೀತ ಪಕ್ಷಗಳ ಬೆಂಬಲ ಪಡೆದುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ. ತೃತೀಯ ರಂಗದ ಪ್ರಬಲ ಪಕ್ಷ ಎಡಪಕ್ಷಗಳು, ಪ್ರಾದೇಶಿಕ ಪಕ್ಷಗಳು ಸೇರಿಕೊಂಡು ಈ ಕೂಟವನ್ನು ರಚಿಸಲಾಗಿದೆ. ಇದು ಎನ್ ಡಿಎ ಮತ್ತು ಯುಪಿಎ ರಂಗಗಳಿಗೆ ಪರ್ಯಾಯ ಎಂದು ಅವರು, ಪರಮಾಣು ಒಪ್ಪಂದ ವಿಷಯ ಇದೀಗ ಮುಗಿದ ಅಧ್ಯಾಯ ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಯುಪಿಎ ಸರ್ಕಾರ ಅಮೆರಿಕದೊಂದಿಗೆ ಮಾಡಿಕೊಂಡ ನಾಗರಿಕ ಪರಮಾಣು ಒಪ್ಪಂದವನ್ನು ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ನಾಗರಿಕ ಪರಣಾಮ ಒಪ್ಪಂದಕ್ಕೆ ಸಂಬಂಧಿಸಿದಂತೆ ಎಡಪಕ್ಷಗಳು ಯುಪಿಎ ಸರ್ಕಾರವನ್ನು ಮನಬಂದಂತೆ ಟೀಕಿಸಿದ್ದವು. ಭಾರತವನ್ನು ಯುಪಿಎ ಸರ್ಕಾರ ಅಮೆರಿಕಕ್ಕೆ ಮಾರಾಟ ಮಾಡಿದೆ ಎಂದು ಇದೇ ಪ್ರಕಾಶ್ ಕಾರಟ್ ಆರೋಪಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications