ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ

By Staff
|
Google Oneindia Kannada News

Mahima Patel
ದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ ಪಟೇಲ್, ದಾವಣಗೆರೆಯಿಂದ ಸ್ಪರ್ಧಿಸುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೇ ತಮ್ಮ ಸಹೋದರ ತ್ರಿಶೂಲ್ ಪಾಣಿ ಪಟೇಲ್ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದರು. ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಜೆಡಿಎಸ್ ಪಕ್ಷಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದ್ದರು.

ಆದರೆ, ನಾನು ಅವರ ಮನವಿಯನ್ನು ನಿರಾಕರಿಸಿರುವೆ ಎಂದರದಲ್ಲದೆ, ಯಾವ ಕಾರಣಕ್ಕೂ ಜೆಡಿಎಸ್ ಸೇರುವುದಿಲ್ಲ. ನಾನು ಪಕ್ಷೇತರನಾಗಿ ನಿಲ್ಲುವೆ, ನನಗೆ ಜೆಡಿಎಸ್ ಬೆಂಬಲ ಸೂಚಿಸಲಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಿದರು. ದಾವಣಗೆರೆಯಲ್ಲಿ ಎಡಪಕ್ಷಗಳು ಬಲಶಾಲಿಯಾಗಿದ್ದು, ತೃತೀಯ ರಂಗದ ಅಭ್ಯರ್ಥಿಯಾಗಿ ಕಣಕ್ಕಿಲಿಯುವೆ ಎಂದು ಮಹಿಮಾ ಸ್ಪಷ್ಟಪಡಿಸಿದರು. ಸರ್ವೋದಯ ಪಕ್ಷ, ರೈತ ಸಂಘಗಳು ನನಗೆ ಬೆಂಬಲ ನೀಡಲಿವೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X