ಪ್ರಕೃತಿ ವಿಕೋಪ ನಿರ್ವಹಣೆಗೆ ಯೋಜನೆ ಆಗತ್ಯ

ಗುಲ್ಬರ್ಗಾ, ಮಾ. 19 : ಗುಲ್ಬರ್ಗಾ ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ವಿಕೋಪ ನಿರ್ವಹಣೆಯ ತುರ್ತು ಕಾರ್ಯಾಚರಣೆ ಕೈಗೊಳ್ಳಲು ಅನುಕೂಲವಾಗುವಂತೆ ಸಮಗ್ರ ಯೋಜನೆ ರೂಪಿಸುವಂತೆ ಗುಲ್ಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತ ಡಾ ರಜನೀಶ ಗೋಯೆಲ್ ಅವರು ಸಲಹೆ ನೀಡಿದರು.

ಅವರು ಬುಧವಾರ ಗುಲ್ಬರ್ಗಾದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಗುಲಬರ್ಗಾ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಅಧಿಕಾರಿಗಳಿಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವಿಕೋಪ ನಿರ್ವಹಣೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಕೃತಿ ವಿಕೋಪಗಳ ನಿರ್ವಹಣೆಗಾಗಿ ಅವಶ್ಯಕ ಪೂರ್ವಸಿದ್ಧತೆ ಹಾಗೂ ಜವಾಬ್ದಾರಿ ವಹಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ವಿಕೋಪದಲ್ಲಿ ಸಿಲುಕಿದ ಜನ-ಜಾನುವಾರುಗಳ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆ, ಪುನರ್ವಸತಿ ಕಲ್ಪಿಸುವುದು ನಂತರದಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳಾಗಿವೆ. ವಿಕೋಪಗಳು ಯಾವುದೇ ಸಮಯದಲ್ಲೂ ಸಂಭವಿಸಬಹುದು. ಎಲ್ಲ ಸರ್ಕಾರಿ ಸಂಸ್ಥೆಗಳು ಒಂದುಗೂಡಿ ಅತ್ಯಂತ ಜವಾಬ್ದಾರಿಯಿಂದ ವಿಕೋಪ ನಿರ್ವಹಣಾ ಕಾರ್ಯ ಕೈಗೊಳ್ಳಬೇಕು. ವಿಕೋಪ ನಿರ್ವಹಣೆಗೆ ಜಿಲ್ಲೆಯಲ್ಲಿ ಲಭ್ಯವಿರುವ ಮೂಲಭೂತ ಸೌಲಭ್ಯ ಹಾಗೂ ಸಲಕರಣೆಗಳ ಮಾಹಿತಿ ಸಂಗ್ರಹಿಸಬೇಕು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+