ಸಂಸದ ಸುರೇಶ್ ಅಂಗಡಿ ವಿರುದ್ದ ಕ್ರಿಮಿನಲ್ ಮೊಕದ್ದಮೆ
ಬೆಳಗಾವಿ, ಮಾ. 19 : ನೀತಿ ಸಂಹಿತೆ ಉಲ್ಲಂಘನೆ ಮತ್ತು ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕ್ರಿಮಿನಿಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ನಿರ್ದೇಶನದ ನೀಡಿದ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಂಗಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಪ್ರಕರಣ ಯಾವುದೇ ರೀತಿ ಅಡ್ಡಿಯಾಗುವುದಿಲ್ಲ ಎಂದು ಚುನಾವಣಾಧಿಕಾರಿಗಳ ಕಚೇರಿಯ ಮೂಲಗಳು ತಿಳಿಸಿವೆ.
ಬೆಳಗಾವಿ ಪಾಲಿಕೆ ಮೇಲಿನ ಭಗವಾಧ್ವಜ ವಿವಾದದಲ್ಲಿ ಮಹಾರಾಷ್ಟ್ರ ಏಕೀಕರಣ ನಡೆಸಿದ ಪ್ರತಿಭಟನೆಯಲ್ಲಿ ಸಂಸದ ಸುರೇಶ್ ಅಂಗಡಿ ಮತ್ತು ಶಾಸಕ ಸಂಜಯ್ ಪಾಟೀಲ್ ಪಾಲ್ಗೊಂಡು ಭಾಷಣ ಮಾಡಿದ ಘಟನೆ ಮತ್ತು ನಂತರ ನಡೆದ ಪ್ರತಿಭಟನೆಗಳ ಸಂಪೂರ್ಣ ವಿವರಗಳುಳ್ಳ 17 ಪುಟಗಳ ವರದಿಯನ್ನು ಜಿಲ್ಲಾಧಿಕಾರಿ ಜೆ ರವಿಶಂಕರ ಮಂಗಳವಾರ ಮುಖ್ಯ ಚುನಾವಣಾಧಿಕಾರಿ ಎಂ ಎನ್ ವಿದ್ಯಾಶಂಕರ ಅವರಿಗೆ ರವಾನಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications