ಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!

ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಶೋಕ್ ಖೇಣಿ ತಾವು ಸ್ಪರ್ಧಿಸುವ ಕ್ಷೇತ್ರವನ್ನು ಕೂಡಲೇ ಪ್ರಕಟಿಸಬೇಕು ಎಂದರು. ಅಶೋಕ್ ಖೇಣಿ ಸಾರ್ವಜನಿಕವಾಗಿ ಬರೀ ಮಾತನಾಡುವುದು ಸರಿಯಲ್ಲ. ಹಾಸನದಲ್ಲಾದರೂ ಸರಿ, ಮಂಡ್ಯದಲ್ಲಾದರೂ ಸರಿ. ಸ್ಪರ್ಧೆಗೆ ನಾನು ಸಿದ್ದ ಎಂದು ಹೇಳುವ ಮೂಲಕ ಖೇಣಿ ಅವರ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದರು.
ನೈಸ್ ರಸ್ತೆ ಮೂಲಕ ರಾಜ್ಯ 36 ಸಾವಿರ ಕೋಟಿ ರುಪಾಯಿ ಕೊಳ್ಳೆ ಹೊಡೆದಿರುವ ಖೇಣಿ ಅವರಿಗೆ ರಾಜ್ಯ ಸರ್ಕಾರಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ತುಘಲಕ್ ದರ್ಬಾರ್ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಕೆಲ ದಿನಗಳಿಂದ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರು ಸಕ್ರಿಯ ರಾಜಕಾರಣಕ್ಕೆ ಇಳಿಯುವ ಒಲವು ತೋರಿಸಿದ್ದರು. ದೇವೇಗೌಡ ವಿರುದ್ಧ ಸ್ಪರ್ಧಿಸುವ ಇಂಗಿತವನ್ನು ಸಹ ವ್ಯಕ್ತಪಡಿಸಿದ್ದರು. ಮಂಡ್ಯದಿಂದ ಸ್ಪರ್ಧಿಸಿದರೆ ಹೇಗೆ ಎನ್ನುವುದನ್ನು ಖೇಣಿ ಆಪ್ತರ ಬಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಡೆಕ್ಕನ್ ಏವಿಯೇಷನ್ ನ ಕ್ಯಾಪ್ಟನ್ ಗೋಪಿನಾಥ್ ಅವರು ಕೂಡಾ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಇಲ್ಲವೇ ರಾಷ್ಟ್ರೀಯ ಪಕ್ಷದ ಟಿಕೆಟ್ ಮೂಲಕ ಕಣಕ್ಕಿಳಿಯುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)
ಪೇಜಾವರ ಶ್ರೀಗಳ ವಿರುದ್ಧ ಕ್ರಮಕ್ಕೆ ದತ್ತಾ ಆಗ್ರಹ
ಗೊಟ್ಟಿಗೆರೆ ಕೆರೆ ವಿವಾದ, ಖೇಣಿಗೆ ಜಯ












Click it and Unblock the Notifications