'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ

ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ ಮತ್ತು ಅನಂತ್ ಕುಮಾರ್ ಅವರ ಸಮ್ಮುಖದಲ್ಲಿ, ಎನ್ಎಮ್ಕೆಆರ್ವಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಚೇಂಜ್ ಇಂಡಿಯಾ ಕರೆದಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅನಂತಕುಮಾರ್, ಇತ್ತೀಚೆಗೆ ಬುದ್ಧಿಜೀವಿಗಳು ಮತಚಲಾವಣೆಯಿಂದ ಹಿಂದೆ ಸರಿಯುತ್ತಿದ್ದಾರೆ. ಪ್ರಜಾತಂತ್ರವನ್ನು ಬಲಪಡಿಸಬೇಕೆಂದರೆ ಯುವಕರು ಮತ್ತು ಬುದ್ಧಿಜೀವಿಗಳು ಒಂದುಗೂಡಬೇಕು ಮತ್ತು ಮತ ಚಲಾಯಿಸಬೇಕು ಎಂದು ಅಭಿಪ್ರಾಯಪಟ್ಟರು.
ಬುದ್ಧಿಜೀವಿ, ಮೊತ್ತಮೊದಲ ಬಾರಿಗೆ ಮತಚಲಾಯಿಸುತ್ತಿರುವ ಯುವಕರು ಮತ್ತು ನೌಕರರನ್ನು ಸೆಳೆಯುವ ಮೂರು ಅಂಶಗಳ ಕಾರ್ಯಕ್ರಮವನ್ನು ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದೆ. ಈ ಕಾರಣಕ್ಕಾಗಿ 'ಅಡ್ವಾಣಿ ಅಟ್ ಕ್ಯಾಂಪಸ್' ಎಂಬ ವಿನೂತನ ಕಾರ್ಯಕ್ರಮವನ್ನು ಬಿಜೆಪಿ ಪ್ರಾರಂಭಿಸಿದ್ದು, 10 ಕೋಟಿ ಹೊಸ ಮತದಾರರನ್ನು ಸೆಳೆಯುವುದು ಮೂಲ ಉದ್ದೇಶ ಎಂದು ಅನಂತ್ ಹೇಳಿದರು.
ನಂತರ ಮಾತನಾಡಿದ ಕರ್ನಾಟಕ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ, ರಾಜಕೀಯದಲ್ಲಿ ಬದಲಾವಣೆ ತರಬೇಕಾದರೆ ಇನ್ನೂ ಶ್ರಮವಹಿಸಿ ಕೆಲಸ ಮಾಡಬೇಕು. ಆರ್ ಕೆ ಮಿಶ್ರಾ ಅಂಥವರ ರಾಜಕೀಯ ಸೇರ್ಪಡೆ ರಾಷ್ಟ್ರದ ಪ್ರಜಾತಂತ್ರಕ್ಕೆ ಹೊಸ ಆಯಾಮ ನೀಡಲಿದೆ ಎಂದರು.
ರಾಜಕೀಯ ಸೇರಿದ ಉದ್ದೇಶವನ್ನು ಹೊರಗೆಡಹಿದ ಮಿಶ್ರಾ, ಮತದಾನದ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ಬುದ್ಧಿಜೀವಿಗಳನ್ನು ಮನವೊಲಿಸುವುದು ಮುಖ್ಯ ಗುರಿ ಎಂದರು. ಬುದ್ಧಿಜೀವಿಗಳು ಮತದಾನದಿಂದ ಹಿಂಜರಿಯುತ್ತಿದ್ದಾರೆ, ದೇಶದ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬನೂ ಭಾಗವಹಿಸುವಂತೆ ಜಾಗೃತಿ ಬೆಳೆಸುವುದೇ ಮೂಲಉದ್ದೇಶ ಎಂದು ಮಿಶ್ರಾ ನುಡಿದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications