'ಚೇಂಜ್ ಇಂಡಿಯಾ' ಆರ್ಕೆ ಮಿಶ್ರಾ ಬಿಜೆಪಿಗೆ

ಅಕ್ಷರಸ್ಥರು ರಾಜಕೀಯ ಸೇರಿದರೆ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಸಾರುವ ಸಾಮಾಜಿಕ ಕಾರ್ಯಕರ್ತ ಆರ್ ಕೆ ಮಿಶ್ರಾ ಅವರು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ ಮತ್ತು ಅನಂತ್ ಕುಮಾರ್ ಅವರ ಸಮ್ಮುಖದಲ್ಲಿ, ಎನ್ಎಮ್ಕೆಆರ್ವಿ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಚೇಂಜ್ ಇಂಡಿಯಾ ಕರೆದಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅನಂತಕುಮಾರ್, ಇತ್ತೀಚೆಗೆ ಬುದ್ಧಿಜೀವಿಗಳು ಮತಚಲಾವಣೆಯಿಂದ ಹಿಂದೆ ಸರಿಯುತ್ತಿದ್ದಾರೆ. ಪ್ರಜಾತಂತ್ರವನ್ನು ಬಲಪಡಿಸಬೇಕೆಂದರೆ ಯುವಕರು ಮತ್ತು ಬುದ್ಧಿಜೀವಿಗಳು ಒಂದುಗೂಡಬೇಕು ಮತ್ತು ಮತ ಚಲಾಯಿಸಬೇಕು ಎಂದು ಅಭಿಪ್ರಾಯಪಟ್ಟರು.
ಬುದ್ಧಿಜೀವಿ, ಮೊತ್ತಮೊದಲ ಬಾರಿಗೆ ಮತಚಲಾಯಿಸುತ್ತಿರುವ ಯುವಕರು ಮತ್ತು ನೌಕರರನ್ನು ಸೆಳೆಯುವ ಮೂರು ಅಂಶಗಳ ಕಾರ್ಯಕ್ರಮವನ್ನು ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದೆ. ಈ ಕಾರಣಕ್ಕಾಗಿ 'ಅಡ್ವಾಣಿ ಅಟ್ ಕ್ಯಾಂಪಸ್' ಎಂಬ ವಿನೂತನ ಕಾರ್ಯಕ್ರಮವನ್ನು ಬಿಜೆಪಿ ಪ್ರಾರಂಭಿಸಿದ್ದು, 10 ಕೋಟಿ ಹೊಸ ಮತದಾರರನ್ನು ಸೆಳೆಯುವುದು ಮೂಲ ಉದ್ದೇಶ ಎಂದು ಅನಂತ್ ಹೇಳಿದರು.
ನಂತರ ಮಾತನಾಡಿದ ಕರ್ನಾಟಕ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ, ರಾಜಕೀಯದಲ್ಲಿ ಬದಲಾವಣೆ ತರಬೇಕಾದರೆ ಇನ್ನೂ ಶ್ರಮವಹಿಸಿ ಕೆಲಸ ಮಾಡಬೇಕು. ಆರ್ ಕೆ ಮಿಶ್ರಾ ಅಂಥವರ ರಾಜಕೀಯ ಸೇರ್ಪಡೆ ರಾಷ್ಟ್ರದ ಪ್ರಜಾತಂತ್ರಕ್ಕೆ ಹೊಸ ಆಯಾಮ ನೀಡಲಿದೆ ಎಂದರು.
ರಾಜಕೀಯ ಸೇರಿದ ಉದ್ದೇಶವನ್ನು ಹೊರಗೆಡಹಿದ ಮಿಶ್ರಾ, ಮತದಾನದ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ಬುದ್ಧಿಜೀವಿಗಳನ್ನು ಮನವೊಲಿಸುವುದು ಮುಖ್ಯ ಗುರಿ ಎಂದರು. ಬುದ್ಧಿಜೀವಿಗಳು ಮತದಾನದಿಂದ ಹಿಂಜರಿಯುತ್ತಿದ್ದಾರೆ, ದೇಶದ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬನೂ ಭಾಗವಹಿಸುವಂತೆ ಜಾಗೃತಿ ಬೆಳೆಸುವುದೇ ಮೂಲಉದ್ದೇಶ ಎಂದು ಮಿಶ್ರಾ ನುಡಿದರು.
(ದಟ್ಸ್ ಕನ್ನಡ ವಾರ್ತೆ)
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications