ಹಾಸನದಿಂದ ಸ್ಪರ್ಧಿಸುವುದಾಗಿ ಖೇಣಿ ಹೇಳಿಕೆ
ಬೆಂಗಳೂರು, ಮಾ. 22 : ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒಂದಕ್ಕಿಂತ ಹೆಚ್ಚು ಪಕ್ಷಗಳು ತಮ್ಮನ್ನು ಕೇಳಿಕೊಂಡಿವೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬರಲಿದೆ ಎಂದು ಖೇಣಿ ಹೇಳಿದ್ದಾರೆ.
ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದರು. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ.
ಅಶೋಕ್ ಖೇಣಿ ತಾವು ಸ್ಪರ್ಧಿಸುವ ಕ್ಷೇತ್ರವನ್ನು ಕೂಡಲೇ ಪ್ರಕಟಿಸಬೇಕು ಎಂದರು. ಅಶೋಕ್ ಖೇಣಿ ಸಾರ್ವಜನಿಕವಾಗಿ ಬರೀ ಮಾತನಾಡುವುದು ಸರಿಯಲ್ಲ. ಹಾಸನದಲ್ಲಾದರೂ ಸರಿ, ಮಂಡ್ಯದಲ್ಲಾದರೂ ಸರಿ. ಸ್ಪರ್ಧೆಗೆ ನಾನು ಸಿದ್ದ ಎಂದು ಹೇಳುವ ಮೂಲಕ ಖೇಣಿ ಅವರ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದರು.
(ದಟ್ಸ್ ಕನ್ನಡ ವಾರ್ತೆ)
ಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!











Click it and Unblock the Notifications