ಈಗ ನಾಲ್ಕನೇ ರಂಗದ ಆಸ್ತಿತ್ವಕ್ಕೆ ಚಿಂತನೆ
ನವದೆಹಲಿ ಮಾ 23: ಚುನಾವಣಾ ಸಮಯದಲ್ಲಿ ಒಗ್ಗಟ್ಟಾಗುವ ಪ್ರಾದೇಶಿಕ ಪಕ್ಷಗಳು ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಾ ಬಂದಿದೆ. ಇತ್ತೀಚೆಗಸ್ಟೇ ಎಡಪಕ್ಷಗಳು, ಜನತಾದಳ, ತೆಲುಗುದೇಶಂ, ಬಿಎಸ್ಪಿ , ಎಐಡಿಎಂಕೆ ಮುಂತಾದ ಪಕ್ಷಗಳು ಒಗ್ಗಟ್ಟಾಗಿ ತೃತೀಯರಂಗಕ್ಕೆ ಚಾಲನೆ ನೀಡಿದೆ. ಇದರ ಬೆನ್ನಲ್ಲೇ ಸದ್ದಿಲ್ಲದೆ ನಾಲ್ಕನೇ ರಂಗವೊಂದು ರಚನೆಗೊಳ್ಳುವ ಸೂಚನೆ ಕಂಡುಬಂದಿದೆ.
ಚುನಾವಣೆಗೆ ಮುಂಚೆ ಒಂದರ ಮೇಲೊಂದರಂತೆ ಏಟು ತಿನ್ನುತ್ತಿರುವ ಕಾಂಗ್ರೆಸ್ ಗೆ ಈ ಸುದ್ದಿ ಬಿಸಿ ಮುಟ್ಟಿಸುವುದಂತೂ ನಿಜ. ಅಧಿಕಾರದ ಈ ಏಣಿಯಾಟದಲ್ಲಿ ಚದುರಿದ್ದ ನಾಯಕರೆಲ್ಲಾ 'ರಾಮ್ ಮನೋಹರ್ ಲೋಹಿಯಾ' ಹೆಸರಲ್ಲಿ ಮತ್ತೆ ಒಂದಾಗುವ ಲಕ್ಷಣಗಳು ಕಾಣಿಸುತ್ತಿವೆ. ತೃತೀಯರಂಗ ಸರಿಯಾಗಿ ಗರಿಗೆದರುವ ಮುಂಚೆಯೇ ನಾಲ್ಕನೇ ರಂಗ ಬೇರುಬಿಡಲು ಆರಂಭಿಸಿದೆ. ಈ ರಂಗದಲ್ಲಿ ಸಮಾಜವಾದಿ ಪಕ್ಷದ ಮುಲಾಯಮ್ ಸಿಂಗ್ ಯಾದವ್, ರಾಷ್ಟ್ರೀಯ ಜನತಾದಳದ ಲಾಲು ಪ್ರಸಾದ್ ಯಾದವ್, ಜೆಡಿಯುನ ನಿತೀಶ್ ಕುಮಾರ್, ಎಲ್ಜೆಪಿಯ ರಾಮ್ ವಿಲಾಸ್ ಪಾಸ್ವಾನ್, ಬಿಜೆಡಿಯ ನವೀನ್ ಪಟ್ನಾಯಕ್ ಮುಂತಾದವರ ಹೆಸರು ಕೇಳಿಬರುತ್ತಿದೆ.
ಸಂಸತ್ತಿನಲ್ಲಿ ಮತಕ್ಕಾಗಿ ಲಂಚ ಪ್ರಕರಣದಲ್ಲಿ ಅಮರ್ ಸಿಂಗ್ ಹೆಸರು ಕೇಳಿಬಂದಾಗ ಅವರ ನೆರವಿಗೆ ಲಾಲೂ, ಪಾಸ್ವಾನ್ ಬಂದಿದ್ದರು. ಈಗ ಈ ಮೂವರೂ ನಾಯಕರುಗಳು ತಮ್ಮತಮ್ಮ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಸೀಟ್ ಹೊಂದಾಣಿಕೆ ವಿಷಯದಲ್ಲಿ ಮುನಿಸಿಕೊಂಡಿದ್ದಾರೆ. ಇತ್ತ ನಿತೀಶ್ ಕುಮಾರ್ ಮತ್ತು ನವೀನ್ ಪಟ್ನಾಯಕ್ ಎನ್ ಡಿ ಎದಿಂದ ದೂರ ಸರಿಯುವ ಉತ್ಸಾಹದಲ್ಲಿದ್ದಾರೆ. ಹೀಗಾಗಿ ನಾಲ್ಕನೇ ರಂಗದ ಮೂಲಕ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವುದು ಈ ನಾಯಕರು ಚಿಂತನೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications