ಉಡುಪಿ, ಡಿವಿಎಸ್ ವಿರುದ್ಧ ದಯಾನಾಯಕ್ ?

ಈ ಸಂಬಂಧ ಕಾಂಗ್ರೆಸ್ ವರಿಷ್ಠರ ಜೊತೆ ದಯಾನಾಯಕ್ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಸದಾನಂದಗೌಡ ವಿರುದ್ದ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮುಂಬೈನಲ್ಲಿ ಸೇವೆ ಸಲ್ಲಿಸಿದ್ದರೂ ಉಡುಪಿ ಜಿಲ್ಲೆಯಲ್ಲಿ ದಯಾನಾಯಕ್ ಹಲವಾರು ಜನಪರ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಬಂಟ, ಬಿಲ್ಲವ ಮತ್ತಿತರ ಸಮುದಾಯದವರು ಅಧಿಕ ಸಂಖ್ಯೆಯಲ್ಲಿರುವುದರಿಂದ ದಯಾನಾಯಕ್ ಗೆ ಟಿಕೆಟ್ ನೀಡಿದರೆ ಸದಾನಂದಗೌಡ ಅವರನ್ನು ಸೋಲಿಸಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ.
ಕ್ಷೇತ್ರ ಬದಲಾವಣೆ ನಂತರ ಜಾತಿವಾರು ಮತಗಳನ್ನು ಆಧರಿಸಿ ಸದಾನಂದಗೌಡ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಅವರ ವಿರುದ್ದ ಸ್ಥಳೀಯರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭ ಎಂದು ನಿರ್ಧರಿಸಿರುವ ಕಾಂಗ್ರೆಸ್ ದಯಾನಾಯಕ್ ಪರ ಒಲವು ತೋರಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
ಚುನಾವಣಾ ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ
ಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ











Click it and Unblock the Notifications