ತಾರಕಕ್ಕೇರಿದ ಬಿಜೆಪಿ-ಆಯೋಗದ ಜಗಳ
ನವದೆಹಲಿ, ಮಾ. 24 : ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಪ್ರಚೋದನಾಕಾರಿ ಭಾಷಣ ನಂತರ ಕೇಂದ್ರ ಚುನಾವಣಾ ಆಯೋಗದ ನಿರ್ಧಾರದಿಂದ ಉಂಟಾಗಿರುವ ವಿವಾದ ಮುಗಿಲು ಮುಟ್ಟಿದ್ದು ಭಾರತೀಯ ಜನತಾ ಪಕ್ಷ ಮತ್ತು ಚುನಾವಣಾ ಆಯೋಗದ ನಡುವೆ ಮಾತಿನ ಸಮರ ತಾರಕಕ್ಕೇರಿದೆ.
ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಗಾಂಧಿಯನ್ನು ಕಣಕ್ಕಿಳಿಸಬೇಡಿ ಎಂದು ಆಯೋಗದ ಹೇಳಿಕೆಯಿಂದ ಕೆರಳಿರುವ ಬಿಜೆಪಿ ತನ್ನ ಪಟ್ಟು ಸಡಿಲಿಸದೇ ಇದ್ದದ್ದು, ಹಾಗೂ ಅವರ ಪರವಾಗಿ ನಾವೆಲ್ಲ ಪ್ರಚಾರಕ್ಕೆ ಹೋಗುತ್ತೇವೆ ಎಂದು ಬಿಜೆಪಿ ಮುಖಂಡರು ತಿರುಗೇಟು ನೀಡಿದ್ದಾರೆ. ಆಯೋಗ ಚುನಾವಣಾ ವಿಷಯದಲ್ಲಿ ಯಾವುದೇ ಪಕ್ಷದ ಪರವಾಗಿ ನಿಲ್ಲದೆ ತಟಸ್ಥವಾಗಿರುವುದು ಉಚಿತ. ತನ್ನ ವ್ಯಾಪ್ತಿ ಮೀರಿ ವರ್ತಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ.
ಪಕ್ಷದ ವಕ್ತಾರ ಬಲ್ಬೀರ್ ಪುಂಜ್ ಮಾತನಾಡಿ, ಚುನಾವಣಾ ಆಯುಕ್ತ ನವೀನ ಚಾವ್ಲಾ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಮುಂಚಿನಿದಲೂ ಉತ್ತಮ ಸಂಬಂಧವಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ವ್ಯಂಗ್ಯವಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪಿತೂರಿ ಎಂದು ಅವರು ಹರಿಹಾಯ್ದಿದ್ದಾರೆ.
ರಾಜಕೀಯ ಒತ್ತಡದಿಂದ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನನ್ನ ವಿರುದ್ದವಿರುವ ಆರೋಪದ ಕುರಿತು ವಾದ ಮಂಡಿಸಲು ನ್ಯಾಯಯುತ ಅವಕಾಶ ನೀಡಲಿಲ್ಲ. ಸತ್ಯಾಂಶ ಖಚಿತಪಡಿಸಿಕೊಳ್ಳುವ ಯಾವುದೇ ರೀತಿಯ ಪ್ರಯತ್ನ ಮಾಡದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಸೋಮವಾರ ವರುಣ್ ಗಾಂಧಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ವರುಣ್ ಸ್ಪರ್ಧೆ ರದ್ದುಗೊಳಿಸಿ: ಮುಸ್ಲಿಂ ಸಂಘಟನೆ
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications