ಮಾ.30ರೊಳಗೆ ಗುರುತಿನ ಚೀಟಿ ಪಡೆಯಿರಿ: ಡಿಸಿ
ಶಿವಮೊಗ್ಗ, ಮಾ. 24 : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಮತದಾನ ಮಾಡಲು ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಭಾರತ ಚುನಾವಣಾ ಆಯೋಗವು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತದಾರರಿಗೆ ಗುರುತಿನ ಚೀಟಿ ನೀಡುವ ಪ್ರಕ್ರಿಯೆಯನ್ನು ಜಿಲ್ಲಾಡಳಿತವು ಕಳೆದ ನವೆಂಬರ್ ನಿಂದಲೆ ವ್ಯಾಪಕವಾಗಿ ಕೈಗೊಂಡಿದೆ.
ಮತದಾರರ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಹ ಸ್ವೀಕರಿಸಿ, ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಕೆಲಸವನ್ನು ಸಹ ಜಿಲ್ಲೆಯಾದ್ಯಂತ ಅತ್ಯಂತ ಚುರುಕಿನ ಕೈಗೊಂಡಿದೆಯಲ್ಲದೆ, ಭಾವಚಿತ್ರವುಳ್ಳ ಗುರುತಿನ ಚೀಟಿ ವಿತರಿಸುವ ಕೆಲಸವನ್ನು ಸಹ ವ್ಯವಸ್ಥಿತವಾಗಿ ಕೈಗೊಂಡಿದೆ. ಮತದಾರರು ತಪ್ಪದೆ ಈಗಾಗಲೆ ಪ್ರಕಟಿಸಿರುವ ದಿನಾಂಕ ಹಾಗೂ ಸ್ಥಳಗಳಿಗೆ ಖುದ್ದು ಭೇಟಿನೀಡಿ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಂಕಜ್ಕುಮಾರ್ ಪಾಂಡೆ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಒಟ್ಟು ಮತದಾರರ ಪೈಕಿ 3,66,273 ಮತದಾರರಿಗೆ ಭಾವಚಿತ್ರವುಳ್ಳ ಗುರುತಿನ ಚೀಟಿ ವಿತರಿಸಬೇಕಾಗಿದ್ದು, ಇದರಲ್ಲಿ ಈಗಾಗಲೆ 79,943 ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಗಿದೆ. ಉಳಿದ ಮತದಾರರಿಗೆ ಗುರುತಿನ ಚೀಟಿ ವಿತರಿಸಲು ಪ್ರತಿ ತಾಲ್ಲೂಕಿನಲ್ಲಿ 5 ರಿಂದ 6 ನೆಮ್ಮದಿ ಕೇಂದ್ರಗಳನ್ನು ಆರಂಭಿಸಿದ್ದು, ಪ್ರತಿದಿನ 32 ಸ್ಥಳಗಳಲ್ಲಿ ಗುರುತಿನ ಚೀಟಿ ವಿತರಿಸುವ ಕ್ರಮ ಕೈಗೊಂಡಿದೆ. ಇದಲ್ಲದೆ, ಆನ್ಲೈನ್ ಮೂಲಕ 8 ಕಡೆ ಹಾಗೂ ಇತರೆ ಕ್ಯಾಮರಾಗಳ ಮೂಲಕ ಈಗಾಗಲೆ ಪ್ರಚಾರ ಪಡಿಸಿರುವ ದಿನಾಂಕ ಹಾಗೂ ಸ್ಥಳಗಳಲ್ಲಿ 30 ಕ್ಯಾಮರಾಗಳ ಮೂಲಕ ಗುರುತಿನ ಚೀಟಿ ನೀಡುವ ಕೆಲಸವನ್ನು ತೀವ್ರವಾಗಿ ಕೈಗೊಂಡಿದೆ.
ಗುರುತಿನ ಚೀಟಿ ಪಡೆಯದಿರುವ ಮತದಾರರಿಗೆ ನೋಟೀಸ್ ಜಾರಿಮಾಡಿದೆ. ಹಾಗೂ ವ್ಯಾಪಕ ವಾಗಿ ಪ್ರಚಾರ ಮಾಡಿದೆ. ಮತದಾರರು ತಪ್ಪದೆ ಮಾರ್ಚ್ ೩೦ ರೊಳಗಾಗಿ ಗುರುತಿನ ಚೀಟಿ ನೀಡುವ ಕೇಂದ್ರಗಳಿಗೆ ಭೇಟಿನೀಡಿ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಜಿಲ್ಲಾಧಿಕಾರಿ ಪಂಕಜ್ಕುಮಾರ್ ಪಾಂಡೆ ಮನವಿ ಮಾಡಿದ್ದಾರೆ.
ಗುರುತಿನ ಚೀಟಿ ಇಲ್ಲದಿದ್ದರೆ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶವೆ ಇಲ್ಲದಿರುವುದರಿಂದ ತಮ್ಮ ಹಕ್ಕು ಮತ್ತು ಕರ್ತವ್ಯದಿಂದ ವಂಚಿತರಾಗುವ ಅವಕಾಶಕ್ಕೆ ಎಡೆಮಾಡಿಕೊಡದೆ, ಭದ್ರಾವತಿ ಹಾಗೂ ಶಿವಮೊಗ್ಗದಲ್ಲಿರುವ ಮತದಾರರ ಸೇವಾ ಕೇಂದ್ರಗಳಿಗೆ ತೆರಳಿ ಗುರುತಿನ ಚೀಟಿ ಪಡೆಯುವಂತೆ ಮನವಿ ಮಾಡಿರುವ ಜಿಲ್ಲಾಧಿಕಾರಿಗಳು ಸಾಕಷ್ಟು ಪ್ರಚಾರ ನೀಡಿದಾಗ್ಯೂ ಬಹಳಷ್ಟು ಕಡೆ ಮತದಾರರು ಗುರುತಿನ ಚೀಟಿ ಪಡೆಯಲು ಕೇಂದ್ರಗಳಿಗೆ ಬರುತ್ತಿಲ್ಲವಾದ್ದರಿಂದ ಎಲ್ಲ ರಾಜಕೀಯ ಪಕ್ಷದ ಮುಖಂಡರು, ಸಂಘ ಸಂಸ್ಥೆಗಳು ಮತದಾರರಿಗೆ ಮಾಹಿತಿ ನೀಡಿ ಗುರುತಿನ ಚೀಟಿ ನೀಡುವ ಕಾರ್ಯಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಬಂಗಾರಪ್ಪ ವಿರುದ್ಧ ಹರಿಹಾಯ್ದ ರಾಘವೇಂದ್ರ
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications