ಟಾಟಾ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ದೂರು
ಪಾಟ್ನಾ, ಮಾ. 24 : ಇಡೀ ದೇಶವೇ ಕಾತುರದಿಂದ ಕಾಯುತ್ತಿರುವ ಶ್ರೀಸಾಮಾನ್ಯನ ಕಾರು ಎಂದೇ ಪ್ರಸಿದ್ಧಿ ಪಡೆದಿರುವ ನ್ಯಾನೋ ಕಾರು ಬಿಡುಗಡೆಗೆ ವಿಘ್ನವೊಂದು ಅಂಟಿಕೊಂಡಿರುವ ಸುದ್ದಿಯೊಂದು ಲಾಲು ಸಾಮ್ರಾಜ್ಯದ ಬಿಹಾರದಿಂದ ವರದಿಯಾಗಿದೆ. ನ್ಯಾನೋ ಬಿಡುಗಡೆ ಮಾಡುವ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ ಎನ್ನುವುದು ಅಲ್ಲಿನ ವಕೀಲೆಯೊಬ್ಬರು ದೂರಿದ್ದು ಪಾಟ್ನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದೇಶದಲ್ಲಿ ಚುನಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಟಾಟಾ ಕಂಪನಿ ಮುಖ್ಯಸ್ಥ ರತನ್ ಟಾಟಾ ನ್ಯಾನೋ ಕಾರನ್ನು ಬಿಡುಗಡೆ ಮಾಡಿರುವುದು ಸರಿಯಲ್ಲ. ಇದು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಬಿಹಾರದ ಶ್ರುತಿ ಸಿಂಗ್ ಎನ್ನುವ ವಕೀಲೆ ಪಾಟ್ನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಪ್ರಕಾರ ನ್ಯಾನೋ ಬಿಡುಗಡೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಅನುಕೂಲವಾಗಲಿದೆ.
ಅದು ಹೇಗೆಂದರೆ, ಟಾಟಾ ಮುಖ್ಯಸ್ಥ ರತನ್ ಟಾಟಾ ಅವರ ನ್ಯಾನೋ ಕಾರ್ ತಯಾರಿಕಾ ಘಟಕ ಪಶ್ಚಿಮ ಬಂಗಾಲದ ಸಿಂಗೂರ್ ನಿಂದ ಎತ್ತಂಗಡಿಯಾದ ನಂತರ ಗುಜರಾತಿನಲ್ಲಿ ಸ್ಥಾಪನೆಯಾಯಿತು. ಇದರಲ್ಲಿ ನರೇಂದ್ರ ಮೋದಿ ಅವರ ಕೈವಾಡ ಇರುವುದು ಸ್ಪಷ್ಟ. ಈಗ ಕಾರು ಬಿಡುಗಡೆ ಮಾಡುವುದರಿಂದ ಮತದಾರರ ಮೇಲೆ ಒತ್ತಡ ಹೇರುವ ಸಾಧ್ಯತೆಗಳು ಇವೆ. ಚುನಾವಣೆ ಪೂರ್ವದಲ್ಲಿ ನ್ಯಾನೋ ಬಿಡುಗಡೆ ಮಾಡಿರುವುದರಲ್ಲಿ ರಾಜಕೀಯ ವಾಸನೆ ಅಡಗಿದೆ. ಘಟಕ ಸ್ಥಾಪಿಸಲು ಮೋದಿ ಭಾರಿ ಅನುಕೂಲ ಒದಗಿಸಿದ್ದರಿಂದ ಅಭಿನಂದನೆ ಸಲ್ಲಿಸಲು ರತನ್ ಟಾಟಾ ತಮ್ಮ ಕನಸಿನ ಕೂಸು ನ್ಯಾನೋ ಕಾರ್ ಬಿಡುಗಡೆ ಮಾಡಿದ್ದಾರೆ ಎಂದು ಶ್ರುತಿಸಿಂಗ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ನ್ಯಾನೋ ಕಾರು ಬಿಡುಗಡೆ ಮಾಡಿದ ರತನ್ ಟಾಟಾ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications