ಚುನಾವಣೆ ಅಧಿಕಾರಿಗೆ ಮುಲಾಯಂ ಬೆದರಿಕೆ
ನವದೆಹಲಿ, ಮಾ. 24 : ಉತ್ತರ ಪ್ರದೇಶದ ಪಿಲಿಭಿತ್ ನ ಬಿಜೆಪಿ ವರುಣ್ ಗಾಂಧಿ ಪ್ರಚೋದನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಸಮಾಜವಾದಿ ಪಕ್ಷ ಮುಖಂಡ ಮುಲಾಯಂ ಸಿಂಗ್ ಯಾದವ್ ಮಹಿಳಾ ಚುನಾವಣೆ ಅಧಿಕಾರಿಗೆ ಬೆದರಿಕೆ ಹಾಕುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಒಳಗಾಗಿದ್ದಾರೆ.
ಸಮಾಜವಾದಿ ಪಕ್ಷದ ಕೆಲ ಮುಖಂಡರ ಶಸ್ತ್ರಾಸ್ತ್ರಗಳ ಪರವಾನಿಗೆಯನ್ನು ರದ್ದುಗೊಳಿಸಿರುವುದು ಮುಲಾಯಂ ಸಿಂಗ್ ಯಾದವ್ ಅವರು ಪಿತ್ತನೆತ್ತಿಗೇರುವಂತೆ ಮಾಡಿದೆ. ಉತ್ತರ ಪ್ರದೇಶದ ಮಣಿಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ಕೆ ಆಗಮಿಸಿದ್ದ ಅವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣೆ ಅಧಿಕಾರಿಯಾಗಿರುವ ಮಿನಿಸ್ತಿ ದಿಲೀಪ್ ವಿರುದ್ಧ ಹರಿಹಾಯ್ದಿದ್ದಾರೆ. ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದುಗೊಳಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಧಮಕಿ ಹಾಕಿದ್ದಾರೆ. ನೀನೊಬ್ಬ ಮಹಿಳೆ ಎಂಬ ಕಾರಣಕ್ಕೆ ನನ್ನ ಕೋಪವನ್ನು ನಿಯಂತ್ರಿಸಿಕೊಂಡಿರುವೆ ಎಂದು ಮುಲಾಯಂ ಸಿಂಗ್ ಅಬ್ಬರಿಸಿದ್ದಾರೆ. ಇದು ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದು ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
(ದಟ್ಸ್ ಕನ್ನಡ ವಾರ್ತೆ)
ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ











Click it and Unblock the Notifications