ಲೋಕಸಭಾ ಚುನಾವಣೆ, ಆಯುಕ್ತರಿಂದ ಸಿದ್ಧತೆ ಪರಿಶೀಲನೆ

ಈ ಸಂದರ್ಭದಲ್ಲಿ ಹಲವಾರು ದೂರುಗಳನ್ನು ಸ್ವೀಕರಿಸಿದ್ದು, ಪ್ರಮುಖವಾಗಿ ಮತಪಟ್ಟಿ ಪರಿಷ್ಕರಣೆ ಸಂಬಂಧವಾಗಿ ಹಾಗೂ ಬೋಗಸ್ ಮತದಾರರ ಕುರಿತಂತೆ ದೂರುಗಳು ಬಂದಿವೆ ಎಂದು ತಿಳಿಸಲಾಯಿತು. ರಾಜಕೀಯ ಪಕ್ಷಗಳ ಸಾರ್ವಜನಿಕ ಸಭೆಗಳಿಗೆ ಸಂಬಂಧಿಸಿದಂತೆ ಅನುಮತಿ ಪಡೆಯುವುದು ತಡವಾಗುತ್ತಿರುವ ಬಗ್ಗೆ ದೂರುಗಳೂ ಬಂದಿದ್ದು ಆ ಸಂಬಂಧ ಒಂದೇ ಸ್ಥಳದಲ್ಲಿ ಎಲ್ಲಾ ಅನುಮತಿಗಳನ್ನು ದೊರಕಿಸುವ ವ್ಯವಸ್ಥೆಯ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಮದ್ಯ ಮತ್ತು ಹಣದ ಹಂಚಿಕೆ ಸಂಬಂಧ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು ಅದರಲ್ಲೂ ಮತದಾನ ನಡೆಯುವ 48 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಬಂದೋಬಸ್ತ್ ಬಗ್ಗೆ ಅಭಿಪ್ರಾಯ ಬಂದಿವೆ ಎಂದು ಅವರು ತಿಳಿಸಿದರು. ಹಿಂದೂ ಸಮಾಜೋತ್ಸವಗಳನ್ನು ಜರಗಿಸುವ ಬಗ್ಗೆ ಸಹ ದೂರುಗಳು ಬಂದಿದ್ದು, ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದೆ ಎಂದರು.
ಬಳ್ಳಾರಿ ಮತ್ತು ಇತರ ಪ್ರದೇಶಗಳಲ್ಲಿ ಇಬ್ಬರು ಅಧಿಕಾರಿಗಳ ಬಗ್ಗೆ ದೂರುಗಳು ಬಂದಿರುವುದು ಅಲ್ಲದೆ, ರಾತ್ರಿ ಹುಬ್ಬಳ್ಳಿಯಲ್ಲಿ ರಾತ್ರಿ 10 ಗಂಟೆಗೂ ಮೇಲ್ಪಟ್ಟು ಸಭೆಗಳು ನಡೆದ ಬಗ್ಗೆ ದೂರುಗಳಿದ್ದು, ಆ ಬಗ್ಗೆ ವಿವರವಾದ ವಿಚಾರಣೆ ಜರುಗಿಸಲು ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರು ಮಹಾನಗರಪಾಲಿಕೆಯಿಂದ ತುಂಡು ಕಾಮಗಾರಿಗಳನ್ನು ನೀಡಿದ್ದ ಬಗ್ಗೆ ದೂರು ಬಂದಿದ್ದು ಮುಖ್ಯ ಚುನಾವಣಾಧಿಕಾರಿಗೆ ಈ ಬಗ್ಗೆ ಅಗತ್ಯ ವಿಚಾರಣೆ ಜರುಗಿಸಲು ತಿಳಿಸಲಾಗಿದೆ. ಕರ್ನಾಟಕದಲ್ಲಿ ಎಪಿಕ್ ಕಾರ್ಡ್ ನೀಡಿಕೆ ಶೇಕಡಾವಾರು ಬಹಳ ಕಡಿಮೆಯಿದೆ ಎಂದು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತರು ಮೈಕ್ರೋ ಅಬ್ಸರ್ವರ್ಗಳ ಸಂಖ್ಯೆಯನ್ನು ಅಂತಹ ಕಡೆ 25 ರಿಂದ ಶೇಕಡಾ 50 ರಷ್ಟು ಇರುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ಬದಲಿ ದಾಖಲೆಗಳ ಆಧಾರದ ಮೇಲೆ ಮತದಾನಕ್ಕೆ ಅನುಮತಿ ನೀಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.
ಚುನಾವಣಾ ಸಂಬಂಧದ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ತೀವ್ರ ನಿಗಾವಹಿಸಲಾಗಿದ್ದು ಈವರೆಗೆ 30 ಲಕ್ಷ ರೂ ಮದ್ಯ, 37 ಲಕ್ಷ ಮೌಲ್ಯದ ಇಲೆಕ್ಟ್ರಾನಿಕ್ ಮತ್ತಿತರ ವಸ್ತುಗಳು, 10 ಲಕ್ಷ ರೂ ನಗದು ಸೇರಿದಂತೆ ಒಟ್ಟಾರೆ 77 ಲಕ್ಷ ರೂ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications