ಅಕ್ಕಿಧಾರಣೆ ಇದೀಗ ಕೆಜಿಗೆ 50 ರುಪಾಯಿ ?
ಬೆಂಗಳೂರು, ಮಾ. 25 : ಅಕ್ಕಿ ದರ ಗಗನಮುಖಿಯಾಗಿರುವ ಬೆನ್ನಲ್ಲೇ ಶ್ರೀಸಾಮಾನ್ಯನಿಗೆ ಹೊರೆಯಾಗುವ ಇನ್ನೊಂದು ಸುದ್ದಿ ಭತ್ತದ ಖಣಜ ಎಂದೇ ಖ್ಯಾತಿಯಾಗಿರುವ ನೆರೆಯ ಆಂಧ್ರಪ್ರದೇಶದಿಂದ ಹೊರಬಿದ್ದು ಐದು ತಿಂಗಳು ಕಳೆದಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಭರಾಟೆ ತಾರಕಕ್ಕೇರಿದೆ. ಮತದಾರರನನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಹರಸಾಹಸ ಮಾಡುತ್ತಿದ್ದು, ಪರಿಣಾಮವಾಗಿ ಅಂತಾರಾಜ್ಯ ರಫ್ತು ಕಾಯ್ದೆಯನ್ನು ಮಾಡುವುದನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ. ಇದರಿಂದ ಕೆಲ ಭಾಗಗಳಲ್ಲಿ ಅಕ್ಕಿ ದರ ದುಪ್ಪಟ್ಟು ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಕಳೆದ ವರ್ಷ ನವೆಂಬರ್ ತಿಂಗಳು ಆಂಧ್ರಪ್ರದೇಶದ ಕಾಂಗ್ರೆಸ್ ಸರ್ಕಾರ ಅಂತಾರಾಜ್ಯ ಅಕ್ಕಿ ರಫ್ತುನ್ನು ನಿಷೇಧಿಸಿತ್ತು. ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಈ ನಿರ್ಧಾರ ಕೈಗೊಂಡಿದ್ದರು. ಆಂಧ್ರಪ್ರದೇಶದಿಂದ 4.31 ಮಿಲಿಯನ್ ಟನ್ ಅಕ್ಕಿ ಆಮದು ಮಾಡಿಕೊಳ್ಳುತ್ತಿತ್ತು. ಆದರೆ, ಅಮದು ಕಡಿಮೆಯಾಗಿರುವ ಕಾರಣ ಅಕ್ಕಿಯ ದರ ದುಪ್ಪಟ್ಟಾಗಲಿದೆ. ಇದರಿಂದ ತುಂಬಾ ಸಮಸ್ಯೆ ಎದುರಾಗುವ ಸಾಧ್ಯತೆಗಳು ಇವೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ಪ್ರಸನ್ನ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಅಕ್ಕಿ ಧಾರಣೆ ಶೀಘ್ರದಲ್ಲಿ ಇಳಿಮುಖವಾಗಲಿದೆ. ಕೇಂದ್ರ ಸರ್ಕಾರದಿಂದ ನ್ಯಾಯಬೆಲೆ ದರದಲ್ಲಿ ಸುಮಾರು 20,000 ಟನ್ ಅಕ್ಕಿ ಖರೀದಿಸಲಾಗುವುದು ಎಂದು ಕರ್ನಾಟಕದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಹರತಾಳ್ ಹಾಲಪ್ಪ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications