ಸಮಾಜೋತ್ಸವ ತಡೆಯಲು ಯಾರಿಂದಲೂ ಸಾಧ್ಯವಿಲ್ಲ
ಬೆಂಗಳೂರು, ಮಾ. 25 : ಹಿಂದೂ ಸಮಾಜೋತ್ಸವ ನಡೆಸುವುದನ್ನು ತಡೆಯುವಂತೆ ನೀಡಿರುವ ದೂರಿಗೆ ಬಿಜೆಪಿ ವರ್ಕಾರ ಶಾಸಕ ಸಿ ಟಿ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜೋತ್ಸವವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಗುಡುಗಿದ್ದಾರೆ. ಆನೆ ನಡೆಯಬೇಕಾದರೆ, ನಾಯಿ ಬೊಗಳುವುದು ಸಹಜ ಎಂದು ಕಾಂಗ್ರೆಸ್ ಕ್ರಮವನ್ನು ಲೇವಡಿ ಮಾಡಿದ್ದಾರೆ.
ನಗರದಲ್ಲಿ ಅವರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಹಿಂದೂ ಸಮಾಜೋತ್ಸವವನ್ನು ಪ್ರತಿ ವರ್ಷ ಆಚರಿಸಿಕೊಂಡು ಬರಲಾಗುತ್ತಿದೆ. ಹಿಂದೂ ಸಂಪ್ರದಾಯವನ್ನು ಎತ್ತಿಹಿಡಿಯುವುದು ಹಾಗೂ ಜನರಲ್ಲಿ ಜನಜಾಗೃತಿ ಉಂಟು ಮಾಡುವುದು ಈ ಸಮಾವೇಶದ ಮೂಲ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಹಿಂದೂ ಸಮಾಜೋತ್ಸವದಿಂದ ಜನರಲ್ಲಿ ಕೋಮು ಭಾವನೆ ಕೆರಳಿಸಿದಂತಾಗಲಿದೆ ಎನ್ನುವ ಆರೋಪವನ್ನು ತಳ್ಳಿಹಾಕಿದ ಅವರು, ಪ್ರತಿ ವರ್ಷವೂ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಆಚರಿಸುವುದು ನಿಶ್ಚಿತ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸಂವಿಧಾನ ಬದ್ಧವಾಗಿ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು ರವಿ ಹೇಳಿದರು.
ಮಂಗಳೂರು ಬೆಂಗಳೂರಿಗೆ ಕೇಂದ್ರ ಚುನಾವಣೆ ಆಯೋಗ ಮುಖ್ಯಆಯುಕ್ತ ಎನ್ ಗೋಪಾಲಸ್ವಾಮಿ ಆಗಮಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂ ಸಮೋಜೋತ್ಸವವನ್ನು ನಿಷೇಧಿಸಿ ಎಂದು ಮನವಿ ಮಾಡಿಕೊಂಡಿತ್ತು. ಇದಕ್ಕೆ ಸ್ಪಂದಿಸಿದ ಆಯುಕ್ತರು ಸಮಾಜೋತ್ಸವದ ಮೇಲೆ ಕಣ್ಣಿಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications