10 ಪೊಲೀಸರನ್ನು ಕೊಂದವನಿಗೆ ಬಿಎಸ್ಪಿ ಟಿಕೆಟ್ !
ಪಾಟ್ನಾ, ಮಾ. 26 : ಕಳೆದ ತಿಂಗಳು 10 ಪೋಲೀಸರನ್ನು ಬರ್ಬರವಾಗಿ ಹತ್ಯಗೈದಿದ್ದ ಬಹುಜನ ಸಮಾಜಪಕ್ಷದ ನಾಯಕರೊಬ್ಬರಿಗೆ ಪಕ್ಷದ ಅಧಿನಾಯಕಿ ಮಾಯಾವತಿ ಲೋಕಸಭಾ ಟಿಕೆಟ್ ದಯಾಪಾಲಿಸಿದ್ದಾರೆ. ಬಿಹಾರ್ ನ ಜಾಮುಯಿ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜವಾದಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುತ್ತಿರುವ ಅರ್ಜುನ್ ರವಿದಾಸ್ ಎಂಬಾತನೆ ಕೊಲೆಗೈದ ಮಹಾಶಯ.
ಫೆಬ್ರವರಿ 9ನೇ ತಾರೀಖಿನಂದು ಬಿಹಾರ ರಾಜ್ಯದ ನಾವಾಡ ಜಿಲ್ಲೆಯಲ್ಲಿ ಪೋಲಿಸ್ ಠಾಣೆಯೊ೦ದಕ್ಕೆ ನುಗ್ಗಿದ ಅರ್ಜುನ್ ಮತ್ತು ಅವರ ಗುಂಪು 18 ಜನ ಇದ್ದ ಪೋಲೀಸರ ಮೇಲೆ ದಾಳಿ ನಡೆಸಿತ್ತು. ಅದರಲ್ಲಿ ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದರೆ ಉಳಿದವರು ಗಾಯಗೊಂಡಿದ್ದರು. ಠಾಣೆಯಲ್ಲಿದ್ದ ಪಿಸ್ತೂಲ್ ಮತ್ತು ಕೆಲವೊಂದು ಕಡತಗಳೊ೦ದಿಗೆ ಅರ್ಜುನ್ ಮತ್ತು ಅವರ ಗುಂಪು ಪರಾರಿಯಾಗಿತ್ತು.
ನಿನ್ನೆ ಜಾಮುಯಿ ಜಿಲ್ಲಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸುವ ಅರ್ಜಿ ಪಡೆಯಲು ಬಂದಾಗ ಪೊಲೀಸರು ಅವರನ್ನು ಮತ್ತು ಅವರ ಚೇಲಾಗಳನ್ನು ಬಂಧಿಸಿದ್ದಾರೆ. ಜನಸಾಮಾನ್ಯರ ಜೀವದ ಬೆಲೆ ಅರಿಯದ ಇಂತಹ ಕ್ರಿಮಿನಲ್ ಗಳು ಸಂಸತ್ ಚುನಾವಣೆಗೆ ಸ್ಪರ್ಧಿಸಿರುವುದು ವಿಪರ್ಯಾಸವಲ್ಲದೆ ಮತ್ತೇನು.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications