ಎಸ್ಎಸ್ಎಲ್ ಸಿ :ರಾಮನಗರದಿ16,764 ವಿದ್ಯಾರ್ಥಿಗಳು
ರಾಮನಗರ, ಮಾ. 26 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ 2009 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 30 ರಿಂದ ಎಪ್ರಿಲ್ 6ರ ವರಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 16,764 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು 1,861 ವಿದ್ಯಾರ್ಥಿನಿಯರು 1,565 ಒಟ್ಟು 3,426 ವಿದ್ಯಾರ್ಥಿಗಳು. ಪರಿಶಿಷ್ಟ ಪಂಗಡದಲ್ಲಿ ಬಾಲಕರು 164, ಬಾಲಕಿಯರು 112 ಒಟ್ಟು 276 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರವರ್ಗ-1ರಲ್ಲಿ ಬಾಲಕರು 221, ಬಾಲಕಿಯರು 165 ಒಟ್ಟು 386 ವಿದ್ಯಾರ್ಥಿಗಳು. ಸಾಮಾನ್ಯ ವರ್ಗದಲ್ಲಿ ಬಾಲಕರು 6,716 ಬಾಲಕಿಯರು 5,960 ಒಟ್ಟು 12,676 ವಿದ್ಯಾರ್ಥಿಗಳು. ಎಲ್ಲಾ ವರ್ಗದವರು ಸೇರಿ 8,962 ಬಾಲಕರು, 7,802 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಈ ಪರೀಕ್ಷೆಯಲ್ಲಿ 14,331 ವಿದ್ಯಾರ್ಥಿಗಳು ಪ್ರಥಮವಾಗಿ ಪರೀಕ್ಷೆ ತೆಗೆದುಕೊಳ್ಳಲಿದ್ದು, 2,106 ಪುನರಾವರ್ತಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಅಲ್ಲದೆ ಖಾಸಗಿ ವಿದ್ಯಾರ್ಥಿಗಳಾಗಿ ದಾಖಲಾಗಿರುವ 327 ವಿದ್ಯಾರ್ಥಿಗಳಿಗೂ ಪರೀಕ್ಷೆಯನ್ನು ಬರೆಯಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 4 ತಾಲ್ಲೂಕುಗಳಲ್ಲಿ 58 ಸಾಮಾನ್ಯ ಪರೀಕ್ಷಾ ಕೇಂದ್ರಗಳನ್ನು ಹಾಗೂ ಖಾಸಗಿ ಆಭ್ಯರ್ಥಿಗಳಿಗೆ 2 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, ಇವುಗಳ ಪೈಕಿ 14 ಕೇಂದ್ರಗಳನ್ನು ಸೂಕ್ಷ್ಮ ಹಾಗೂ 9 ಕೇಂದ್ರಗಳನ್ನು ಅತೀ ಸೂಕ್ಷ್ಮಕೇಂದ್ರಗಳೆಂದು ಗುರುತಿಸಲಾಗಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಹಾಗೂ ಯಾವುದೇ ಅಕ್ರಮ ನಡೆಯದಂತೆ ನಿಗಾವಹಿಸಲು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನೊಳಗೊಂಡ ಜಾಗೃತ ದಳವನ್ನು ಹಾಗೂ ತಾಲ್ಲೂಕುಮಟ್ಟದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡ ಜಾಗೃತದಳಗಳನ್ನು ರಚಿಸಲಾಗಿದೆ. ಈ ಜಾಗೃತ ದಳಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿವೀಕ್ಷಿಸಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications