ಬಳ್ಳಾರಿ, ಎಎಸ್ಪಿ ಸೇರಿ ಐವರು ವರ್ಗಾವಣೆ
ಬೆಂಗಳೂರು, ಮಾ. 26 : ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆಯ ಆಯುಕ್ತ ಸೇರಿದಂತೆ ಐವರನ್ನು ಕೇಂದ್ರ ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ. ಆಡಳಿತರೂಢ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆಂಬ ಪ್ರತಿಪಕ್ಷಗಳ ದೂರನ್ನು ಪರಿಗಣಿಸಿದ ಆಯೋಗ ಈ ಕ್ರಮಕ್ಕೆ ಮುಂದಾಗಿದೆ.
ಬಳ್ಳಾರಿ ಜಿಲ್ಲೆಯ ಹೆಚ್ಚುವರಿ ಎಸ್ಪಿ ಆಶೋಕ್ ಕರಿಯಾ ಅವರ ಜಾಗಕ್ಕೆ ಡಿ ಎಂ ಕೃಷ್ಣನ್ ರಾಜು ಅವರನ್ನು ನಿಯೋಜಿಸಲಾಗಿದೆ. ಬಳ್ಳಾರಿ ಪಾಲಿಕೆ ಆಯುಕ್ತ ಶಿವರಾಜ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಇವರ ಜಾಗಕ್ಕೆ ಗುರುಲಿಂಗಪ್ಪ ಅವರನ್ನು ನೇಮಕ ಮಾಡಲಾಗಿದೆ. ಕೂಡ್ಲಗಿ ಡಿವೈಎಸ್ಪಿ ಎಚ್ ವೈ ತುರಾಯಿ ಜಾಗಕ್ಕೆ ಎಂ ಎಲ್ ಮದುರವೀಣಾ ಅವರನ್ನು ನಿಯೋಜಿಸಲಾಗಿದೆ. ಬಳ್ಳಾರಿ ಕೌಲ್ ಬಜಾರ್ ಪೊಲೀಸ್ ಇನ್ಸ್ ಪೆಕ್ಟರ್ ವಿದ್ಯಾಧರ್ ದತ್ತಾರಾಮ್ ಬೈಕೇರಿಕರ್ ಅವರ ಸ್ಥಾನಕ್ಕೆ ಆರ್ ನಾಗರಾಜ್ ಹಾಗೂ ಸಂಡೂರು ವೃತ್ತ ಇನ್ಸ್ ಪೆಕ್ಟರ್ ರಮಾಕಾಂತ್ ಯಲ್ಲಪ್ಪ ಕುಲ್ಲಾರ್ ಅವರ ಜಾಗಕ್ಕೆ ಶಮೀದ್ ಪಾಷಾ ಅವರನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಚುನಾವಣೆ ಆಯೋಗದ ಮುಖ್ಯಸ್ಥ ಎಂ ಎನ್ ವಿದ್ಯಾಶಂಕರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications