ಯುಪಿಎಗೆ 'ಕೈ' ಅಮ್ಮನಿಗೆ 'ಜೈ' ಅಂದ ಪಿಎಂಕೆ
ಚೆನ್ನೈ ಮಾ 26: ಯುಪಿಎ ಒಕ್ಕೂಟದ ಪ್ರಮುಖ ಅಂಗಪಕ್ಷವಾದ ಪಿಎಂಕೆ ಇಂದು ಅದರ ಜೊತೆಗಿನ ಮೈತ್ರಿ ಮುರಿದುಕೊಂಡಿದ್ದು ಜಯಲಲಿತಾ ಸಾರಥ್ಯದ ಎಐಎಡಿಎಂಕೆ ಜೊತೆ ಜಂಟಿಯಾಗಿ ಲೋಕಸಭಾ ಚುನಾವಣೆ ಎದುರಿಸಲು ನಿರ್ಧರಿಸಿದೆ. ಜಯಲಲಿತಾ ಪಿಎಂಕೆ ಗೆ ಏಳು ಲೋಕಸಭಾ ಕ್ಷೇತ್ರಗಳನ್ನು ಮತ್ತು ಮುಂದೆ ಒಂದು ರಾಜ್ಯಸಭಾ ಸ್ಥಾನವನ್ನು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಇಂದು ಪಿಎಂಕೆ ಮುಖ್ಯಸ್ಥ ಎಸ್ ರಾಮದಾಸ್ ಅವರು ತಮ್ಮ ಪಕ್ಷದ ಪ್ರಮುಖರ ಜೊತೆಗಿನ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಸಂಜೆ ಚಹಾಕೂಟಕ್ಕೆ ಜಯಲಲಿತಾ ಎಂಡಿಎಂಕೆ ನಾಯಕ ವೈಕೋ ಮತ್ತು ಎಡಪಕ್ಷಗಳನ್ನು ಆಹ್ವಾನಿಸಿದ್ದಾರೆ. ಪಿಎಂಕೆ ಹಾಗೂ ಕಾಂಗ್ರೆಸ್ ನಡುವಿನ ಭಿನ್ನಮತವನ್ನು ಬಗೆಹರಿಸಲು ಕೇಂದ್ರ ಗೃಹಸಚಿವ ಚಿದಂಬರಂ ನಿನ್ನೆ ಪಿಎಂಕೆ ನಾಯಕರೊಂದಿಗೆ ನಡೆಸಿದ ಸಂಧಾನ ಮಾತುಕತೆ ಯಶಸ್ವಿಯಾಗಲಿಲ್ಲ.
ಕೇಂದ್ರ ಸಚಿವರಿಬ್ಬರ ರಾಜೀನಾಮೆ ?
ಮೈತ್ರಿ ಮುರಿದುಬಿದ್ದ ಹಿನ್ನಲೆಯಲ್ಲಿ ಪಿಎಂಕೆ ಸಂಸದರಾಗಿ ಯುಪಿಎ ಸಂಪುಟದಲ್ಲಿ ಸಚಿವರಾಗಿರುವ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವೇಲು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
(ದಟ್ಸ್ ಕನ್ನಡವಾರ್ತೆ)
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications