ಶಂಕಿತ ನಕ್ಸಲ್ ನಿಂದ 350 ಕೆಜಿ ಜಿಲೆಟಿನ್ ವಶ
ಬೆಂಗಳೂರು, ಉಡುಪಿ, ಮಾ. 26 : ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಅಪಾರ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದು, ಘಟನೆ ಸಂಬಂಧಿಸಿದಂತೆ ಮಂಗಳೂರು ಮೂಲಕ ವ್ಯಾಪಾರಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿರುವ ಘಟನೆ ಗುರುವಾರ ಮಧ್ಯಾಹ್ನ ಪಡುಬಿದ್ರೆಯಲ್ಲಿ ನಡೆದಿದೆ.
ಸುರೇಶ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ಸುಮಾರು 350 ಕೆಜಿ ಜಿಲೆಟಿನ್ ಹಾಗೂ 1,500 ಡೆಟೋನೇಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ಚಿಕ್ಕ ಮಟ್ಟದ ವ್ಯಾಪಾರಿಯಾಗಿರುವ ಸುರೇಶ್ ಇಂದು ಮಂಗಳೂರಿನಿಂದ ಪಡುಬಿದ್ರೆಗೆ ಓಮ್ನಿ ಕಾರು ಮೂಲಕ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಸಮಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಜಯಕುಮಾರ್ ಸಿಂಗ್ ತಿಳಿಸಿದ್ದಾರೆ.
ವಿಚಾರಣೆ ಆರಂಭಿಸಿದ್ದು, ಯಾವ ಕಾರಣಕ್ಕೆ ಸ್ಫೋಟಗಳನ್ನು ಸಾಗಿಸುತ್ತಿದ್ದ ಎಂದು ತಿಳಿದು ಬಂದಿಲ್ಲ. ನಕ್ಸಲ್ ಸಂಘಟನೆಗೆ ಸೇರಿದ ವ್ಯಕ್ತಿ ಇರುಬಹುದು ಎಂದು ಪೊಲೀಸಕು ಶಂಕಿಸಿದ್ದು, ವಿಚಾರಣೆ ನಂತರ ಸಂಪೂರ್ಣ ವಿವರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಮಯದಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಈ ಸ್ಫೋಟಕ ಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಎಡೆಮಾಡಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications