ಸಿಎಂ ಸುಳ್ಳು ಹೇಳುವುದರಲ್ಲಿ ನಂಬರ್ 1, ಸಿದ್ದು
ಕೋಲಾರ, ಮಾ. 26 : ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಮುಖ್ಯಮಂತ್ರಿಗಳು ಉದ್ದಟತನದಿಂದ ವರ್ತಿಸುತ್ತಿದ್ದಾರೆ. ಬಡವರ ಕಷ್ಟಸುಖಕ್ಕೆ ಬಾರದ ಸರ್ಕಾರ ಮಠ-ಮಾನ್ಯಗಳಿಗೆ ದುಡ್ಡು ಕೊಡುವುದರಲ್ಲಿ ಮಾತ್ರ ಹಿಂದೆ ಬಿದ್ದಿಲ್ಲ. ರಾಜ್ಯದ ಇತಿಹಾಸದಲ್ಲಿ ಯಡಿಯೂರಪ್ಪನವರಷ್ಟು ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ನಾನು ಕಂಡಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಕೋಲಾರದಲ್ಲಿ ಆಯೋಜಿಸಲಾಗಿದ್ದ ಭಾರತ್ ನಿರ್ಮಾಣ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಡವರ, ದಲಿತರ ಅಥವಾ ಹಿಂದುಳಿದವರ ಪರ ಅಲ್ಲ. ರಾಜ್ಯದ ಸರ್ವತೋಮುಖ ಅಭಿವೃದ್ದಿ ಬಗ್ಗೆ ಯೋಚಿಸದ ಸರ್ಕಾರ ಬಡವರಿಗೆ ಲ್ಯಾಪ್ ಟಾಪ್ ಕೊಡುವ ಭರವಸೆ ನೀಡಿದೆ. ಬಡವರು ಲ್ಯಾಪ್ಟಾಪ್ ತೆಗೆದುಕೊಂಡು ಏನ್ ಉಪ್ಪಿನಕಾಯಿ ಹಾಕಿ ನೆಕ್ಕೋದಾ? ಎಂದು ತನ್ನ ಎಂದಿನ ವ್ಯಂಗ್ಯ ಧಾಟಿಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ತಮ್ಮದು ಸುಸಂಸ್ಕೃತ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ, ಶ್ರೀರಾಮಸೇನೆ ಕಾರ್ಯಕರ್ತರು ಮಂಗಳೂರು ಪಬ್ ಮೇಲೆ ಮತ್ತು ಯುವತಿಯರ ಮೇಲೆ ದಾಳಿ ಮಾಡಿದಾಗ ಏನು ಮಾಡುತ್ತಿತ್ತು. ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚರ್ಚ್ ಮೇಲೆ ದಾಳಿ ನಡೆಯಿತು. ಮಾತೆದ್ದಿದರೆ ಸುಳ್ಳು ಹೇಳುವ ಡೋಂಗಿ ಸರ್ಕಾರ ಇದು ಎಂದು ಸಿದ್ದು ಟೀಕಿಸಿದರು.
(ದಟ್ಸ್ ಕನ್ನಡ ವಾರ್ತೆ)
ಭಾರತ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ, ದೇವೇಗೌಡ
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications