ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ
ಬೆಂಗಳೂರು, ಮಾ.30: ಬಿಜೆಪಿ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳಿಗೆ ಒಂದೆರಡು ದಿನದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಮಂಡ್ಯ, ಬೆಂಗಳೂರುಗ್ರಾಮಾಂತರ, ಬೆಂಗಳೂರು ಉತ್ತರ ಹಾಗೂ ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿಗಳ ಆಯ್ಕೆ ಆಗಬೇಕಿದೆ.
ಬೆಂಗಳೂರು ಗ್ರಾಮಾಂತರಕ್ಕೆ ಯೋಗೀಶ್ವರ್ ಆಯ್ಕೆ ನಿಶ್ಚಿತವಾಗಿದ್ದು ಮಂಡ್ಯಕ್ಕೆ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ , ವಿದ್ಯಾ ನಾಗೇಂದ್ರ ಹೆಸರುಗಳು ಕೇಳಿ ಬಂದಿವೆ. ಚಿಕ್ಕ ಬಳ್ಳಾಪುರದಿಂದ ಅಶ್ವತ್ಥನಾರಾಯಣ ಸ್ಪರ್ಧಿಸುವ ಸಾಧ್ಯತೆಗಳಿವೆ.
ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸೂಕ್ತ ಅಭ್ಯರ್ಥಿಯನ್ನು ಪ್ರಕಟಿಸಲು ಬಿಜೆಪಿಯ ಕಸರತ್ತು ಮುಂದುವರಿದಿದೆ.
(ದಟ್ಸ್ ಕನ್ನಡ ವಾರ್ತೆ)
ಯೋಗೀಶ್ವರ್ ವಿದ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆ












Click it and Unblock the Notifications