ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ

ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ ಕನ್ನಡಪರ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ. ಸದ್ಯಕ್ಕೆ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಲೋಚನೆ ನಮ್ಮದು' ಎಂದು ಅವರು ವಿವರಿಸಿದರು.
ರಾಷ್ಟ್ರೀಯ ಪಕ್ಷಗಳ ಪ್ರತಿನಿಧಿಗಳಿಂದ ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ. ಹೀಗಾಗಿ ಅಖಾಡಕ್ಕೆ ಇಳಿಯುವುದು ಅನಿವಾರ್ಯ' ಎಂದ ವಾಟಾಳ್, ಕನ್ನಡದ ಹೆಸರಿನಲ್ಲಿ ಸಮಾನ ವೇದಿಕೆ ಸೃಷ್ಟಿಸಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ' ಎಂದರು.
ಜನರಿಂದಲೇ ಹಣ ಸಂಗ್ರಹ
ಚುನಾವಣೆ ಎದುರಿಸಲು ಜನರಿಂದಲೇ ಸಂಗ್ರಹಿಸುತ್ತೇವೆ. ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡುತ್ತೇವೆ. ಪ್ರಣಾಳಿಕೆಯನ್ನು ಶೀಘ್ರ ದಲ್ಲೇ ಬಿಡುಗಡೆ ಮಾಡಲಾಗುವುದು. ಈ ಪ್ರಯೋಗಕ್ಕೆ ರಾಜ್ಯದ ಎಲ್ಲ ಕನ್ನಡ ಸಂಘಟನೆಗಳ ಬೆಂಬಲ ಪಡೆಯಲು ಮಾತುಕತೆ ಆರಂಭಿಸಿದ್ದೇವೆ ಎಂದೂ ಹೇಳಿದರು.
ಬಿಜೆಪಿಯ ಅಪರೇಷನ್ ಕಮಲವನ್ನು ಮಟ್ಟ ಹಾಕಬೇಕಿದೆ. ಜಾತ್ಯಾತೀತ ಸರ್ಕಾರಕ್ಕೆ ಕನ್ನಡ ಪರ ಸಂಘಟನೆಗಳ ಬೆಂಬಲವಿರುತ್ತದೆ. ದೇವೇಗೌಡ, ಬಂಗಾರಪ್ಪ , ಧರ್ಮಸಿಂಗ್ ಮುಂತಾದ ನಾಯಕರುಗಳ ಕ್ಷೇತ್ರಗಳಲ್ಲಿ ಅವರಿಗೆ ಬೆಂಬಲ ನೀಡುವ ಬಗ್ಗೆ ಕೂಡ ಚಿಂತನೆ ನಡೆದಿದೆ ಎಂದು ವಾಟಾಳ್ ಹೇಳಿದರು.
ರಾಜ್ಯದಲ್ಲಿನ ಅನೈತಿಕ ಪಕ್ಷಾಂತರವು ದೇಶದ ಯಾವ ಭಾಗದಲ್ಲೂ ನಡೆಯುತ್ತಿಲ್ಲ. ಬಿಜೆಪಿಯಂತೂ ಪಕ್ಷಾಂತರಿಗಳಿಗೆ ಅಂಗಡಿಗೆಯನ್ನೇ ತೆರೆದು ಕೂತಿದೆ ಎಂದು ಆರೋಪಿಸಿದರು. 'ಆರು ಕ್ಷೇತ್ರಗಳ ಬದಲು ಒಂದೇ ಕ್ಷೇತ್ರದಲ್ಲಿ ಅಭ್ಯರ್ಥಿ ನಿಲ್ಲಿಸಿ ಅವರ ಗೆಲುವಿಗೆ ಎಲ್ಲ ಕನ್ನಡಪರ ಸಂಘಟನೆಗಳೂ ಶ್ರಮಿಸಬೇಕು' ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಕಿವಿಮಾತು ಹೇಳಿದರು. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮಾಜಿ ಶಾಸಕ ಪ್ರಭಾಕರ ರೆಡ್ಡಿ, ಕನ್ನಡ ಹೋರಾಟಗಾರರಾದ ಸಿದ್ದಯ್ಯ, ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಜಗನ್ನಾಥ ರೆಡ್ಡಿ, ರಫಾಯಿಲ್ ರಾಜ್ ಮತ್ತಿತರರು ಪಾಲ್ಗೊಂಡಿದ್ದರು.
(ದಟ್ಸ್ ಕನ್ನಡವಾರ್ತೆ)
ಜನರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ: ಬಿಎಸ್ ವೈ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications