ನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು

ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, ಜೆಡಿಎಸ್ ವಿರುದ್ಧ 9, ಬಿಎಸ್ಪಿ ವಿರುದ್ಧ 2 ಹಾಗೂ ಇತರ ಪಕ್ಷಗಳ ವಿರುದ್ಧ ಒಟ್ಟು 14 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಬಳ್ಳಾರಿಯಲ್ಲಿ 11, ಶಿವಮೊಗ್ಗದಲ್ಲಿ 4, ಧಾರವಾಡದಲ್ಲಿ 3 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2 ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದರು.
ನಗದು, ವಸ್ತುಗಳ ವಶ : ಮತದಾರರ ಓಲೈಕೆಗಾಗಿ ಹಂಚಲು ಉದ್ದೇಶಿಸಲಾಗಿದ್ದ ರೂ. 1.73 ಕೋಟಿ ಮೌಲ್ಯದ ನಗದು, ಮದ್ಯ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ 501 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಆರು ಪ್ರಕರಣಗಳಲ್ಲಿ 41 ಲಕ್ಷ ನಗದು, 486 ಪ್ರಕರಣಗಳಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಮದ್ಯ ಹಾಗೂ 9 ಪ್ರಕರಣಗಳಲ್ಲಿ 57 ಲಕ್ಷ ರೂಪಾಯಿ ಮೌಲ್ಯದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ವಿವರ ನೀಡಿದರು.
ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ 50 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ 29 ಪ್ರಕರಣಗಳನ್ನು ಬಳ್ಳಾರಿ, 12 ಪ್ರಕರಣಗಳನ್ನು ಶಿವಮೊಗ್ಗದಲ್ಲಿ ಹಾಗೂ 6 ಪ್ರಕರಣಗಳನ್ನು ದಕ್ಷಿಣ ಕನ್ನಡದಲ್ಲಿ ದಾಖಲಿಸಲಾಗಿದೆ. ಹಿಂಸಾತ್ಮಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ 12 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅದರಲ್ಲಿ 7 ಪ್ರಕರಣ ಶಿವಮೊಗ್ಗದಲ್ಲಿ, ಮಂಡ್ಯ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ ಎರಡು ಪ್ರಕರಣ ದಾಖಲಿಸಲಾಗಿದೆ. ಮತದಾರರಿಗೆ ಆಮಿಷವೊಡ್ಡಿದಕ್ಕಾಗಿ 4 ಪ್ರಕರಣ ದಾಖಲಿಸಲಾಗಿದ್ದು, 2 ಬಳ್ಳಾರಿಯಲ್ಲಿ, ಹಾಸನ ಹಾಗೂ ಬಿಬಿಎಂಪಿ ದಕ್ಷಿಣ ವಲಯದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಚುನಾವಣಾ ಆಯೋಗವು ಈಗಾಗಲೇ 501 ಕ್ರಿಮಿನಲ್ ಮೊಕದ್ದಮೆ ಹೂಡಿದ್ದು, ಇನ್ನೂ 370 ದೂರುಗಳು ಪರಿಶೀಲನೆಯಲ್ಲಿವೆ ಎಂದು ವಿದ್ಯಾಶಂಕರ್ ಹೇಳಿದರು.
ಉತ್ತರ ಕನ್ನಡ, ಧಾರವಾಡ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವಿವಿಧ ಪಕ್ಷಗಳ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳ ವರದಿಯನ್ನು ವಿಡಿಯೋ ಸಿಡಿಯೊಂದಿಗೆ ಭಾರತ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕರ್ನಾಟಕ ಗೃಹ ಮಂಡಳಿಯ 959 ಎಕರೆ ಜಮೀನು ಖರೀದಿ ಪ್ರಕ್ರಿಯೆಗೆ ಚುನಾವಣಾ ಆಯೋಗವು ತಡೆಯಾಜ್ಞೆ ನೀಡಿದೆ ಎಂದು ಸಹ ಅವರು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications