ಬಂಗಾರಪ್ಪಗೆ ಸಿಎಂ ಯಡಿಯೂರಪ್ಪ ಸವಾಲ್
ಶಿವಮೊಗ್ಗ ,ಮಾ 30: ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಂಗಾರಪ್ಪ 1967ರಲ್ಲಿ ರಾಜಕೀಯ ಪ್ರವೇಶ ಮಾಡಿದವರು. ನನ್ನ ಮಗ ರಾಘವೇಂದ್ರ 1973ರಲ್ಲಿ ಹುಟ್ಟಿದ್ದು. 1983ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬದಿಂದ ಪ್ರಚಾರಕ್ಕೆ ಹೋಗದೇನೇ ಗೆದ್ದಿದ್ದೇನೆ ಎಂದು ಬಂಗಾರಪ್ಪ ಹೇಳಿಕೆ ನೀಡುತ್ತಾರೆ. ನನ್ನ ಮಗ ಸ್ಪರ್ಧಿಸಿರುವ ಈ ಕ್ಷೇತ್ರದಲ್ಲಿ ಸಿಎಂ ಪದೇ ಪದೇ ಬರುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇಂಥ ಆರೋಪ ಮಾಡುವ ಅವರಿಗೆ ಒಂದು ಸವಾಲು ಎಸೆಯುತ್ತಿದ್ದೇನೆ, ಅವರು ಮತ್ತು ಅವರ ಮಕ್ಕಳು ಈಗಿನ ಲೋಕಸಭಾ ಚುನಾವಣೆ ಪ್ರಚಾರದಿಂದ ದೂರವಿರಲಿ. ನಾನು ಕೂಡಾ ನನ್ನ ಮಗನಪರ ಪ್ರಚಾರಕ್ಕೆ ಬರುವುದಿಲ್ಲ, ನೋಡೋಣ ಚುನಾವಣೆ ಎದುರಿಸೋಣ ಎಂದು ಬಂಗಾರಪ್ಪಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಹಿರಂಗ ಸವಾಲೆಸೆದಿದ್ದಾರೆ.
ಕಾಂಗ್ರೆಸ್ ಮತ್ತು ದಳ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿದೆ. ಬೆಂಗಳೂರು ದಕ್ಷಿಣ, ಮೈಸೂರು ಮತ್ತು ಗುಲ್ಬರ್ಗ ಕ್ಷೇತ್ರದಲ್ಲಿ ಜನತಾದಳ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಕಾಂಗ್ರೆಸ್ ಮತ್ತು ದಳ ಜಾತಿ ಆಧರಿಸಿ ಟಿಕೆಟ್ ನೀಡಿದೆ, ಎರಡೂ ಪಕ್ಷಗಳಿಗೆ ಜನ ಸರಿಯಾದ ಪಾಠ ಕಲಿಸಲಿದ್ದಾರೆ. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಏಪ್ರಿಲ್ 7 ರಂದು ಒಂದು ದಿನದ ಭೇಟಿಗಾಗಿ ರಾಜ್ಯಕ್ಕೆ ಬರಲಿದ್ದಾರೆ. ಅಂದು ತುಮಕೂರು, ಚಿತ್ರದುರ್ಗ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.
(ದಟ್ಸ್ ಕನ್ನಡವಾರ್ತೆ)
ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications