ಬಂಗಾರಪ್ಪಗೆ ಸಿಎಂ ಯಡಿಯೂರಪ್ಪ ಸವಾಲ್
ಶಿವಮೊಗ್ಗ ,ಮಾ 30: ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಂಗಾರಪ್ಪ 1967ರಲ್ಲಿ ರಾಜಕೀಯ ಪ್ರವೇಶ ಮಾಡಿದವರು. ನನ್ನ ಮಗ ರಾಘವೇಂದ್ರ 1973ರಲ್ಲಿ ಹುಟ್ಟಿದ್ದು. 1983ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬದಿಂದ ಪ್ರಚಾರಕ್ಕೆ ಹೋಗದೇನೇ ಗೆದ್ದಿದ್ದೇನೆ ಎಂದು ಬಂಗಾರಪ್ಪ ಹೇಳಿಕೆ ನೀಡುತ್ತಾರೆ. ನನ್ನ ಮಗ ಸ್ಪರ್ಧಿಸಿರುವ ಈ ಕ್ಷೇತ್ರದಲ್ಲಿ ಸಿಎಂ ಪದೇ ಪದೇ ಬರುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇಂಥ ಆರೋಪ ಮಾಡುವ ಅವರಿಗೆ ಒಂದು ಸವಾಲು ಎಸೆಯುತ್ತಿದ್ದೇನೆ, ಅವರು ಮತ್ತು ಅವರ ಮಕ್ಕಳು ಈಗಿನ ಲೋಕಸಭಾ ಚುನಾವಣೆ ಪ್ರಚಾರದಿಂದ ದೂರವಿರಲಿ. ನಾನು ಕೂಡಾ ನನ್ನ ಮಗನಪರ ಪ್ರಚಾರಕ್ಕೆ ಬರುವುದಿಲ್ಲ, ನೋಡೋಣ ಚುನಾವಣೆ ಎದುರಿಸೋಣ ಎಂದು ಬಂಗಾರಪ್ಪಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಹಿರಂಗ ಸವಾಲೆಸೆದಿದ್ದಾರೆ.
ಕಾಂಗ್ರೆಸ್ ಮತ್ತು ದಳ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿದೆ. ಬೆಂಗಳೂರು ದಕ್ಷಿಣ, ಮೈಸೂರು ಮತ್ತು ಗುಲ್ಬರ್ಗ ಕ್ಷೇತ್ರದಲ್ಲಿ ಜನತಾದಳ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಕಾಂಗ್ರೆಸ್ ಮತ್ತು ದಳ ಜಾತಿ ಆಧರಿಸಿ ಟಿಕೆಟ್ ನೀಡಿದೆ, ಎರಡೂ ಪಕ್ಷಗಳಿಗೆ ಜನ ಸರಿಯಾದ ಪಾಠ ಕಲಿಸಲಿದ್ದಾರೆ. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಏಪ್ರಿಲ್ 7 ರಂದು ಒಂದು ದಿನದ ಭೇಟಿಗಾಗಿ ರಾಜ್ಯಕ್ಕೆ ಬರಲಿದ್ದಾರೆ. ಅಂದು ತುಮಕೂರು, ಚಿತ್ರದುರ್ಗ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.
(ದಟ್ಸ್ ಕನ್ನಡವಾರ್ತೆ)
ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications