ಛೋಟಾ ಶಕೀಲ್ ನ ಐವರು ಸಹಚರರ ಬಂಧನ
ಮಂಗಳೂರು, ಮಾ. 31: ಲೋಕಸಭೆ ಚುನಾವಣೆ ವೇಳೆಯಲ್ಲಿ ಪ್ರಮುಖ ರಾಜಕಾರಣಿಗಳನ್ನು ಅಪಹರಿಸಲು ಸಂಚು ರೂಪಿಸಿದ್ದ ಐವರು ಭೂಗತ ಪಾತಕಿಗಳನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಈ ಐವರು ಭೂಗತ ದೊರೆ ಛೋಟಾ ಶಕೀಲ್ ನ ಸಹಚರರು ಎಂದು ತಿಳಿದು ಬಂದಿದೆ ಎಂದು ಡಿಜಿಪಿ ಅಜಯ್ ಕುಮಾರ್ ಸಿಂಗ್ ತಿಳಿಸಿದರು.
ಸೋಮವಾರ ಪಶ್ಚಿಮ ವಲಯದ ವಿಶೇಷ ತನಿಖಾ ತಂಡ ಬಂಧಿಸಿರುವ ಐವರಲ್ಲಿ ಇಂಟರ್ ಪೊಲ್ ನ ವಾಂಟೆಡ್ ಪಟ್ಟಿಯಲ್ಲಿರುವ ಪಾತಕಿ ರಷೀದ್ ಮಲಬಾರಿ ಕೂಡ ಇದ್ದಾನೆ. ಪ್ರಮುಖ ರಾಜಕಾರಣಿಗಳನ್ನು ಅಪಹರಿಸುವುದು, ಹತ್ಯೆಗೈಯುವುದು ಇವರ ಉದ್ದೇಶವಾಗಿತ್ತು. ಇವೆಲ್ಲಾ ಡಾನ್ ದಾವೂದ್ ಇಬ್ರಾಹಿಂ ನ ಬಲಗೈ ಬಂಟ ಶಕೀಲ್ ನ ಯೋಜನೆ ಎಂದು ಅಜಯ್ ಕುಮಾರ್ ಸಿಂಗ್ ಹೇಳಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲದವನಾದ ರಷೀದ್ ಮಲಬಾರಿ ಅಲಿಯಾಸ್ ಡಬಲ್( 38) , ಸಹಿಲ್ ಇಬ್ರಾಹಿಂ ಇಬ್ಬರು ಸದ್ಯ ಮಹಾರಾಷ್ಟ್ರದ ಥಾಣಾ ಜಿಲ್ಲೆಯಲ್ಲಿ ನೆಲೆಯೂರಿ ಈ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಪಿಸ್ತೂಲ್ ಹಾಗೂ 19 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸುಮಾರು 13 ವರ್ಷಗಳಿಂದ ತಲೆ ಮರೆಸಿಕೊಂಡಿರುವ ರಷೀದ್ ಮಲಬಾರಿಯ ಮೇಲೆ 5 ಕೊಲೆ ಕೇಸುಗಳಿವೆ . ಮಲೇಷಿಯಾ ಹಾಗೂ ಇಂಟರ್ ಪೊಲ್ ಗೆ ಬೇಕಾದ ಇವನು 9 ತಿಂಗಳ ಹಿಂದೆ ನೇಪಾಳ ಮೂಲಕ ಭಾರತ ಪ್ರವೇಶಿಸಿದ್ದಾನೆ ಎಂದು ಅಜಯ್ ಕುಮಾರ್ ಮಾಹಿತಿ ನೀಡಿದರು.
ಪಾತಕಿಗಳನ್ನುಏ. 13 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇವರನ್ನು ಹಿಡಿದ ಪೊಲೀಸ್ ತಂಡಕ್ಕೆ 2 ಲಕ್ಷರು ಬಹುಮಾನ ಘೋಷಿಸಲಾಗಿದೆ ಎಂದು ಐಜಿಪಿ ಗೋಪಾಲ್ ಹೊಸೂರ್ ಹೇಳಿದರು.
(ಏಜೆನ್ಸೀಸ್)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications