ಛೋಟಾ ಶಕೀಲ್ ನ ಐವರು ಸಹಚರರ ಬಂಧನ
ಮಂಗಳೂರು, ಮಾ. 31: ಲೋಕಸಭೆ ಚುನಾವಣೆ ವೇಳೆಯಲ್ಲಿ ಪ್ರಮುಖ ರಾಜಕಾರಣಿಗಳನ್ನು ಅಪಹರಿಸಲು ಸಂಚು ರೂಪಿಸಿದ್ದ ಐವರು ಭೂಗತ ಪಾತಕಿಗಳನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಈ ಐವರು ಭೂಗತ ದೊರೆ ಛೋಟಾ ಶಕೀಲ್ ನ ಸಹಚರರು ಎಂದು ತಿಳಿದು ಬಂದಿದೆ ಎಂದು ಡಿಜಿಪಿ ಅಜಯ್ ಕುಮಾರ್ ಸಿಂಗ್ ತಿಳಿಸಿದರು.
ಸೋಮವಾರ ಪಶ್ಚಿಮ ವಲಯದ ವಿಶೇಷ ತನಿಖಾ ತಂಡ ಬಂಧಿಸಿರುವ ಐವರಲ್ಲಿ ಇಂಟರ್ ಪೊಲ್ ನ ವಾಂಟೆಡ್ ಪಟ್ಟಿಯಲ್ಲಿರುವ ಪಾತಕಿ ರಷೀದ್ ಮಲಬಾರಿ ಕೂಡ ಇದ್ದಾನೆ. ಪ್ರಮುಖ ರಾಜಕಾರಣಿಗಳನ್ನು ಅಪಹರಿಸುವುದು, ಹತ್ಯೆಗೈಯುವುದು ಇವರ ಉದ್ದೇಶವಾಗಿತ್ತು. ಇವೆಲ್ಲಾ ಡಾನ್ ದಾವೂದ್ ಇಬ್ರಾಹಿಂ ನ ಬಲಗೈ ಬಂಟ ಶಕೀಲ್ ನ ಯೋಜನೆ ಎಂದು ಅಜಯ್ ಕುಮಾರ್ ಸಿಂಗ್ ಹೇಳಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲದವನಾದ ರಷೀದ್ ಮಲಬಾರಿ ಅಲಿಯಾಸ್ ಡಬಲ್( 38) , ಸಹಿಲ್ ಇಬ್ರಾಹಿಂ ಇಬ್ಬರು ಸದ್ಯ ಮಹಾರಾಷ್ಟ್ರದ ಥಾಣಾ ಜಿಲ್ಲೆಯಲ್ಲಿ ನೆಲೆಯೂರಿ ಈ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಪಿಸ್ತೂಲ್ ಹಾಗೂ 19 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸುಮಾರು 13 ವರ್ಷಗಳಿಂದ ತಲೆ ಮರೆಸಿಕೊಂಡಿರುವ ರಷೀದ್ ಮಲಬಾರಿಯ ಮೇಲೆ 5 ಕೊಲೆ ಕೇಸುಗಳಿವೆ . ಮಲೇಷಿಯಾ ಹಾಗೂ ಇಂಟರ್ ಪೊಲ್ ಗೆ ಬೇಕಾದ ಇವನು 9 ತಿಂಗಳ ಹಿಂದೆ ನೇಪಾಳ ಮೂಲಕ ಭಾರತ ಪ್ರವೇಶಿಸಿದ್ದಾನೆ ಎಂದು ಅಜಯ್ ಕುಮಾರ್ ಮಾಹಿತಿ ನೀಡಿದರು.
ಪಾತಕಿಗಳನ್ನುಏ. 13 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇವರನ್ನು ಹಿಡಿದ ಪೊಲೀಸ್ ತಂಡಕ್ಕೆ 2 ಲಕ್ಷರು ಬಹುಮಾನ ಘೋಷಿಸಲಾಗಿದೆ ಎಂದು ಐಜಿಪಿ ಗೋಪಾಲ್ ಹೊಸೂರ್ ಹೇಳಿದರು.
(ಏಜೆನ್ಸೀಸ್)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications