ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರು ವಿವಿಗೆ ನನ್ನ ಹೆಸರಿಡಬೇಡಿ: ಸಿದ್ದಗಂಗಾ ಸ್ವಾಮೀಜಿ

By Staff
|
Google Oneindia Kannada News

Siddaganga Seer
ತುಮಕೂರು, ಮಾ 31: "ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಬಳಿ ಪ್ರಸ್ತಾಪಿಸದೇ ನಿರ್ಧಾರ ತೆಗೆದುಕೊಂಡಿದ್ದಾರೆ, ತುಮಕೂರು ವಿಶ್ವವಿದ್ಯಾಲಯಕ್ಕೆ ನನ್ನ ಹೆಸರಿಡಬೇಡಿ" ಎಂದು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಸರಕಾರಕ್ಕೆ ತಿಳಿಸಿದ್ದಾರೆ.

ಸರಕಾರಕ್ಕೆ ಈ ಸಂಬಂಧ ಪತ್ರ ಬರೆಯುವೆ, ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಈ ವಿಷಯದ ಬಗ್ಗೆ ನನ್ನ ಬಳಿ ಮಾತನಾಡಿದ್ದರು ಅವರಿಗೂ ನನ್ನ ನಿರ್ಧಾರದ ಬಗ್ಗೆ ತಿಳಿಸಿದ್ದೆ. ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸ್ವಾಮೀಜಿಯವರು ವಿಶ್ವವಿದ್ಯಾಲಯಕ್ಕೆ ನನ್ನ ಹೆಸರಿಡುವುದಕ್ಕೆ ನನ್ನ ವಿರೋಧವಿದೆ ಹಾಗು ಇದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X