ಎ ಬಿ ಪಾಟೀಲರಿಗೆ ಜೆಡಿಎಸ್ ನಿಂದ ಉಡುಗೊರೆ

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಎಂದೇ ಪರಿಚಿತವಾಗಿರುವ ಕಾಂಗ್ರೆಸ್ ನಲ್ಲಿ ಒಳಜಗಳಗಳಿಂದ ಬೇಸತ್ತು ಜೆಡಿಎಸ್ ಸೇರಿಕೊಂಡಿದ್ದಾರೆ. ಇದನ್ನು ರಾಜಕೀಯ ದಾಳವಾಗಿ ಬಳಸಿಕೊಂಡಿರುವ ಜೆಡಿಎಸ್ ನಾಯಕರು ಲಿಂಗಾಯಿತರ ಮತಗಳನ್ನು ಪಡೆಯಲು ಎ ಬಿ ಪಾಟೀಲ್ ರಿಗೆ ಜೆಡಿಎಸ್ ಕಾರ್ಯಾಧ್ಯಕ್ಷ ಸ್ಥಾನ ನೀಡಿದೆ. ಉತ್ತರ ಕರ್ನಾಟಕದಲ್ಲಿ ಅಭ್ಯರ್ಥಿಗಳಲ್ಲಿದೆ ಕಂಗಾಲಾಗಿದ್ದ ಜೆಡಿಎಸ್ ಪಕ್ಷಕ್ಕೆ ಇದೀಗ ಸ್ವಲ್ಪ ಶಕ್ತಿ ಬಂದಂತಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಉತ್ತರ ಕರ್ನಾಟರ ಭಾಗದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಪಾಟೀಲ್ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಹೇಳಿದರು.
ಹುಕ್ಕೇರಿ ಕ್ಷೇತ್ರದ ಶಾಸಕರಾಗಿದ್ದ ಇವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ ಉಮೇಶ ಕತ್ತಿ ಎದುರು ಪರಾಭವಗೊಂಡಿದ್ದರು. ನಂತರ ಕತ್ತಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ನಂತರ ನಡೆದ ಉಪಚುನಾವಣೆಯಲ್ಲಿ ಪಾಟೀಲ್ ಸ್ಪರ್ಧಿಸಿರಲಿಲ್ಲ. ಉಮೇಶ ಕತ್ತಿ ಅವರಿಗೆ ದಾಖಲೆ ಜಯ ಲಭಿಸಿತ್ತು. ಇತ್ತೀಚೆಗೆ ಉಮೇಶ್ ಕತ್ತಿ ಅವರೆದುರು ಪಾಟೀಲ್ ಆಟ ಕುಂಠಿತಗೊಂಡಿತ್ತು.
(ದಟ್ಸ್ ಕನ್ನಡ ವಾರ್ತೆ)
ಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ












Click it and Unblock the Notifications