ಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ

Jagadish Tytler
ನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ ಗೆ ಸಿಬಿಐ ಮನವಿ ಮಾಡಿಕೊಂಡಿದೆ.

1984 ರಲ್ಲಿ ಸಿಖ್ ಸಮುದಾಯದ ಬಯಾಂತ್ ಸಿಂಗ್ ನೇತೃತ್ವದಲ್ಲಿ ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾ ಗಾಂಧಿ ಅವರ ಗುಂಡಿಟ್ಟು ಕೊಲೆ ಮಾಡಲಾಗಿತ್ತು. ಇದಕ್ಕೆ ಪ್ರತಿಕಾರವಾಗಿ ಸಿಖ್ ರ ಮೇಲೆ ತೀವ್ರವಾದ ದಾಳಿ ನಡೆದಿತ್ತು. ಈ ಹತ್ಯಾಕಾಂಡದಲ್ಲಿ ನೂರಾರು ಅಮಾಯಕ ಸಿಖ್ ಜನರನ್ನು ಕಾಂಗ್ರೆಸ್ ಕಾರ್ಯಕರ್ತರು ಹತ್ಯೆಗೈದಿದ್ದರು. ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಖ್ ರನ್ನು ಹತ್ಯೆ ಮಾಡಲು ಜಗದೀಶ್ ಟೈಟ್ಲರ್ ಆದೇಶ ನೀಡಿದ್ದಾರೆ ಎಂದು ಆರೋಪಿಸಿ ಜಸ್ಬೀರ್ ಸಿಂಗ್ ಎಂಬುವವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸಿಖ್ ಹತ್ಯಾಕಾಂಡ ಪ್ರಕರಣದ ತನಿಖೆಗೆ ನಾನಾವತಿ ಆಯೋಗವನ್ನು ನೇಮಿಸಲಾಗಿತ್ತು.

ಸಿಬಿಐ ಕ್ರಮಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿರುವ ಜಗದೀಶ್ ಟೈಟ್ಲರ್, ಕೆಲ ಶಕ್ತಿಗಳು ನನ್ನನ್ನು ಬಲಿಪಶು ಮಾಡಲು ಯತ್ನಿಸಿದವು. ಆದರೆ, ಯಾವ ತಪ್ಪು ಮಾಡದ ನಾನು, ನಿರಪರಾಧಿ ಎಂದು ಸಿಬಿಐ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿರುವುದು ನ್ಯಾಯವನ್ನು ಎತ್ತಿಹಿಡಿದಂತಾಗಿದೆ ಎಂದಿದ್ದಾರೆ. ಆದರೆ, ಸಿಬಿಐ ನಿಲುವಿಗೆ ಬಿಜೆಪಿ ತೀವ್ರ ವಿರೋಧಿ ವ್ಯಕ್ತಪಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+