ಖರ್ಗೆ, ಎಚ್ಡಿಕೆ, ಬೆಳಮಗಿ ನಾಮಪತ್ರ ಸಲ್ಲಿಕೆ
ಬೆಂಗಳೂರು, ಏ. 2 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ರೇವೂ ನಾಯಕ ಬೆಳಮಗಿ ಸೇರಿದಂತೆ 32 ಅಭ್ಯರ್ಥಿಗಳು ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕುಮಾರಸ್ವಾಮಿ, ಗುಲ್ಬರ್ಗ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ರೇವೂ ನಾಯಕ್ ಬೆಳಮಗಿ, ಚಿಕ್ಕೋಡಿಯಿಂದ ಸಚಿವ ಉಮೇಶ್ ಕತ್ತಿ ಮತ್ತು ಅವರ ಸಹೋದರ ರಮೇಶ್ ಕತ್ತಿ, ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜಮೀರ್ ಅಹ್ಮದ್ ಮತ್ತು ಪಿ ಸಿ ಮೋಹನ್ ತಮ್ಮ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಇದರ ಮಧ್ಯೆ ಎರಡನೇ ಹಂತದಲ್ಲಿ ನಡೆಯುವ ಚುನಾವಣೆಗಳಿಗೆ ಇಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಮೊದಲನೇ ಹಂತದ ಚುನಾವಣೆಗೆ ನಿನ್ನೆ ಗಣನೀಯ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
ಬಳ್ಳಾರಿ ಲೋಕಸಬೆ ಚುನಾವಣೆ ಮುಂದೂಡಿಕೆ ?
ಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ











Click it and Unblock the Notifications