ಆಡಳಿತ ಸುಧಾರಣೆ ಸಮಿತಿಗೆ ಮೊಯ್ಲಿ ಗುಡ್ ಬೈ
ನವದೆಹಲಿ, ಏ. 2 : ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಅವರು ಆಡಳಿತ ಸುಧಾರಣೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಗಳ ಉಸ್ತುವಾರಿ ಮುಖಂಡರ ಸ್ಥಾನಗಳನ್ನು ಪುನರ್ ರಚಿಸಿರುವ ಎಐಸಿಸಿ, ಆಂಧ್ರಪ್ರದೇಶ ಮತ್ತು ಆಸ್ಸಾಂ ರಾಜ್ಯಗಳ ಉಸ್ತುವಾರಿ ಸ್ಥಾನಕ್ಕೂ ಮೊಯ್ಲಿ ರಾಜೀನಾಮೆ ನೀಡಿದ್ದಾರೆ.
ಮೊಯ್ಲಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಂಧ್ರಪ್ರದೇಶಕ್ಕೆ ಕೇಂದ್ರದ ಸಚಿವ ವಯಲಾರ್ ರವಿ ಹಾಗೂ ಅಸ್ಸಾಂ ರಾಜ್ಯಕ್ಕೆ ಕೆ ಕೇಶವರಾವ್ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಅಲ್ಲದೇ ಮೊಯ್ಲಿ ಹೊಂದಿದ್ದ ಪಕ್ಷದ ವಕ್ತಾರ ಸ್ಥಾನವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರಿಗೆ ವಹಿಸಲಾಗಿದೆ ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು












Click it and Unblock the Notifications