ಬಳ್ಳಾರಿ ಲೋಕಸಭೆ ಚುನಾವಣೆ ಮುಂದೂಡಿಕೆ ?
ನವದೆಹಲಿ, ಏ. 2 : ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕಣವಾಗಿರುವ ಪ್ರತಿಷ್ಠಿತ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಅತ್ಯಂತ ಸೂಕ್ಷ್ಮ ಕ್ಷೇತ್ರವೆ೦ದು ಚುನಾವಣಾ ಆಯೋಗ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಶಾಂತ ಪರಿಸ್ಥಿತಿ ನೆಲೆಸದಿದ್ದರೆ ಚುನಾವಣೆ ಮುಂದೂಡಬೇಕಾದೀತು ಎಂದು ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಸಿದೆ.
ಈ ಕ್ಷೇತ್ರದಲ್ಲಿ ಶಾಂತಿಯುತ ಮತ್ತು ನ್ಯಾಯಸಮ್ಮತ ಮತದಾನ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಪ್ರತಿಪಕ್ಷಗಳ ದೂರಿನ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಐವರು ಅಧಿಕಾರಿಗಳನ್ನು ಜಿಲ್ಲೆಯಿಂದ ಎತ್ತಂಗಡಿ ಮಾಡಿತ್ತು, ಅಲ್ಲದೇ 11 ಸಾವಿರ ನಕಲಿ ಮತದಾರ ಹೆಸರನ್ನು ಪಟ್ಟಿಯಿಂದ ವಜಾಗೊಳಿಸಿತ್ತು.
ಗಣಿ ಧಣಿಗಳಿಗೆ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಆರೋಗ್ಯ ಸಚಿವ ಶ್ರೀರಾಮುಲು ಅವರ ಸಹೋದರಿ ಶಾಂತಾ ಸ್ಪರ್ಧಿಸಿದ್ದಾರೆ. ಹೇಗಾದರೂ ಮಾಡಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಂಸದ ಎನ್ ವೈ ಹನುಮಂತಪ್ಪ ಅವರಿಗೆ ಬೆಂಬಲ ಸೂಚಿಸಿ ಕಣದಿಂದ ಹಿಂದಕ್ಕೆ ಸರಿಯುವ ಸಾಧ್ಯತೆ ಇದೆ.
(ದಟ್ಸ್ ಕನ್ನಡ ವಾರ್ತೆ)
ಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ












Click it and Unblock the Notifications