ಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು

No need to panic, polling will be peaceful: Chidambaram
ನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದರು.

ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಚಿದಂಬರಂ, ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು. ಶಾಂತಿಯುತವಾಗಿ ಚುನಾವಣೆಗಳನ್ನು ನಡೆಸಲು ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ಭದ್ರತೆ ವ್ಯವಸ್ಥೆಯನ್ನು ಈಗಾಗಲೇ ಅಂದಾಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಲೋಕಸಭೆ ಚುನಾವಣೆಗಳನ್ನು ಮುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮಹಿಳಾ ಫಿದಾಯಿನ್ ಗಳು ಭಾರತದೊಳಗೆ ನುಸುಳಿದ್ದಾರೆ ಎನ್ನುವ ಮಾಧ್ಯಮಗಳ ವರದಿಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಅವರು, ಉಗ್ರರು ನುಸುಳುವ ಸ್ಥಳಗಳಲ್ಲಿ ಅಗತ್ಯ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದರು. ಏಕತೆಯಿಂದ ಭಯೋತ್ಪಾದಕರ ವಿರುದ್ಧ ಹೋರಾಡಬೇಕಾದ ಅವಶ್ಯಕತೆ ಇದೆ. ಆದರೆ, ಕೆಲ ರಾಜಕೀಯ ಪಕ್ಷಗಳು ಕೋಮುಭಾವನೆ ಕೆರಳಿಸಿ ದೇಶ ವಿಭಜಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಪರೋಕ್ಷವಾಗಿ ಬಿಜೆಪಿ ಮೇಲೆ ಕಿಡಿಕಾರಿದರು.

ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಗಾಂಧಿ ಸ್ಪರ್ಧೆಯನ್ನು ಬೆಂಬಲಿಸಿರುವ ಬಿಜೆಪಿ ಕ್ರಮವನ್ನು ತೀವ್ರವಾಗಿ ಖಂಡಿಸಿದ ಚಿದಂಬರಂ, ಸಿಡಿಯಲ್ಲಿ ದಾಖಲಾಗಿರುವ ಹೇಳಿಕೆ ಸುಳ್ಳೆ ಎಂದು ಪ್ರಶ್ನಿಸಿದರು. ವಿವಿಐಪಿ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರಲ್ಲದೇ, ತೃತೀಯ ರಂಗದ ಸಮಾವೇಶಕ್ಕೆ ತೆರಳುತ್ತಿರುವ ಎನ್ ಸಿಪಿ ಮುಖಂಡ ಶರದ್ ಪವಾರ್ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಅಡ್ವಾಣಿ ಪ್ರಧಾನಮಂತ್ರಿ ಆಗೋದು ಗ್ಯಾರಂಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+