ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್ಎಸ್ಎ ವಿವರಣೆ ಕೇಳಿದ ಸುಪ್ರಿಂಕೋರ್ಟ್

By Staff
|
Google Oneindia Kannada News

ನವದೆಹಲಿ, ಏ. 2 : ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ದಾಖಲಿಸಿರುವುದನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ವರುಣ್ ಗಾಂಧಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಘಟನೆ ಸಂಬಂಧಿಸಿದ ಎಲ್ಲ ವಿವರಗಳು ಮತ್ತು ಎನ್ಎಸ್ಎ ಕಾಯಿದೆ ದಾಖಲಿಸಿರುವ ಬಗ್ಗೆ ಕಾರಣ ಕೇಳಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪಿಲಿಭಿತ್ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.

ನನ್ನ ರಾಜಕೀಯ ಜೀವನ ಕೊನೆಗೊಳಿಸುವ ಹುನ್ನಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ನನ್ನ ವಿರುದ್ಧ ಎನ್ಎಸ್ಎ ಕಾಯಿದೆಯನ್ನು ದಾಖಲಿಸಿದೆ. ಹಿಂದೂ ಆಗಿರುವ ನಾನು, ನನ್ನ ಬಗ್ಗೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ. ಪಿಲಿಬಿಟ್ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಬಯಸಿದ್ದು, ನಾಮಪತ್ರ ಸಲ್ಲಿಸಬೇಕಾಗಿದೆ. ಹಾಗೂ ಕ್ಷೇತ್ರದಾದ್ಯಂತ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಬೇಕಿದೆ ಆದ್ದರಿಂದ ವರುಣ್ ಗಾಂಧಿ ಅವರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ವರುಣ್ ಗಾಂಧಿ ಪರ ವಕೀಲರು ಮಾಧ್ಯಮಗಳಿಗೆ ವಿವರಿಸಿದರು. ವಿಚಾರಣೆ ಮುಂದೂಡಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಏಪ್ರಿಲ್ 13 ರಂದು ನಡೆಸಲಾಗುವುದು ಎಂದು ಹೇಳಿದೆ.

ವರುಣ್ ಗಾಂಧಿ ಅವರಿಗೆ ಹತ್ಯೆ ಬೆದರಿಕೆ ಕರೆಗಳು ಬಂದಿರುವ ಪಿಲಿಭಿತ್ ಜೈಲಿನಿಂದ ಇಟಾ ಜೈಲಿಗೆ ವರ್ಗಾಯಿಸಲಾಗಿದೆ. ಹೆಚ್ಚಿನ ಭದ್ರತೆ ಕೋರಿ ವರುಣ್ ಗಾಂಧಿ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರಿಗೆ ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು 17 ರಂದು ಪಿಲಿಭಿತ್ ಕ್ಷೇತ್ರದ ಚುನಾವಣೆ ಪ್ರಚಾರದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದರು.

(ದಟ್ಸ್ ಕನ್ನಡ ವಾರ್ತೆ)
ಮಹಾಚುನಾವಣೆ 2009 : ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ
ವರುಣ್ ಗಾಂಧಿ ಹತ್ಯೆಗೆ ಛೋಟಾ ಶಕೀಲ್ ಸಂಚು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X