ಎಸ್ಪಿ ಪ್ರಧಾನ ಕಾರ್ಯದರ್ಶಿಯಾಗಿ ಸಂಜಯ್ ದತ್
ನವದೆಹಲಿ, ಏ. 2 : ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಂಕೋರ್ಟ್ ಅಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ತೀವ್ರ ನಿರಾಶ ಹೊಂದಿದ್ದ ಸಂಜಯ್ ದತ್ ಅವರ ಸಮಾಧಾನ ಪಡಿಸಲು ಎಸ್ಪಿ ಮುಖಂಡರು ಅವರಿಗೆ ಮಹತ್ವದ ಜವಾಬ್ದಾರಿಯನ್ನು ಹೊರಿಸಿದೆ.
ಪ್ರಧಾನ ಕಾರ್ಯದರ್ಶಿ ಹುದ್ದೆ ನೇಮಕದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದತ್, ಪಕ್ಷದ ಹಿತಕ್ಕೆ ಪ್ರಮಾಣಿಕವಾಗಿ ಕೆಲಸ ಮಾಡುವ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಮಾಣಿಕವಾಗಿ ದುಡಿಯುವೆ. ಪಕ್ಷದ ಮುಖಂಡರು ನಂಬಿಕೆಯಿಟ್ಟು ನೀಡಿರುವ ಜವಾಬ್ದಾರಿಯುತ ಸ್ಥಾನಕ್ಕೆ ಚ್ಯುತಿ ಬಾರದ ಹಾಗೆ ಉತ್ತಮ ಕೆಲಸ ಮಾಡುವೆ ಎಂದು ಅವರು ಹೇಳಿದರು.
1993ರಲ್ಲಿ ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿರುವ ಸಂಜಯ್ ದತ್ ಗೆ ಸುಪ್ರಿಂಕೋರ್ಟ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
ನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ












Click it and Unblock the Notifications