ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಉಳಿದಂತೆ ಹಳಸಲು ಭರವಸೆಗಳ ಮಹಾಪೂರವೇ ಪ್ರಣಾಳಿಕೆಯಲ್ಲಿ ತುಂಬಿದೆ. ರಸ್ತೆ ನಿರ್ಮಾಣ, ಮೂಲಭೂತ ಸೌಕರ್ಯ ಕಲ್ಪಿಸುವುದು. ಉದ್ಯೋಗ ಸೃಷ್ಟಿಸುವುದು, ರೈತರ ಸಾಲ ಮನ್ನಾ, ವೇತನ ಹೆಚ್ಚಳ ಇಂತಹ ಕೆಲ ಚುನಾವಣೆ ಗಿಮಿಕ್ ಗಳು ಬಿಜೆಪಿ ಪ್ರಣಾಳಿಕೆಯಲ್ಲಿ ಅಡಗಿವೆ. ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಅಧ್ಯಕ್ಷ ರಾಜನಾಥ್ ಸಿಂಗ್, ಅರುಣ್ ಜೈಟ್ಲಿ, ಮುರಳಿ ಮನೋಹರ ಜೋಶಿ, ವೆಂಕಯ್ಯ ನಾಯ್ಡು ಉಪಸ್ಥಿತರಿದ್ದರು. ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು.
* ಗ್ರಾಮೀಣ ರಸ್ತೆಗಳ ಅಭಿವೃದ್ಧಿ
* ದೇಶಾದ್ಯಂತ ಲಾಡ್ಲಿ ಲಕ್ಷ್ಮಿ ಯೋಜನೆ ಜಾರಿ
* ಪ್ರತಿ ಭಾರತೀಯ ಪ್ರಜೆಗೂ ಕಡ್ಡಾಯ ಗುರುತಿನ ಚೀಟಿ
* ಜಾಗತಿಕ ಆರ್ಥಿಕ ಕುಸಿತಕ್ಕೆ ಸೂಕ್ತ ಕ್ರಮ
* ಪೋಟಾ ಮಾದರಿ ವಿನೂತನ ಕಾಯ್ದೆ ಜಾರಿ
* ಪ್ರತ್ಯೇಕ ತೆಲಂಗಾಣ ರಾಜ್ಯ ಸ್ಥಾಪನೆಗೆ ಬೆಂಬಲ
* ಗ್ರಾಮೀಣ ಮೂಲ ಸೌಕರ್ಯಗಳಿಗೆ ಒತ್ತು
* ರಾಮಮಂದಿರ ನಿರ್ಮಾಣಕ್ಕೆ ಬದ್ಧ
* ಬಿಪಿಎಲ್ ಕುಟುಂಬಗಳಿಗೆ 2 ಕೆಜಿ ಅಕ್ಕಿ ಮತ್ತು ಗೋಧಿ
* ಶಕ್ತಿಶಾಲಿ ವಿದೇಶಾಂಗ ನೀತಿ ಹೊಂದುವತ್ತ ಚಿಂತನೆ
* ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕ್ರಮ
* 3 ಲಕ್ಷಕ್ಕಿಂತ ಕಡಿಮೆ ಆದಾಯವಿರುವವರಿಗೆ ತೆರಿಗೆ ವಿನಾಯಿತಿ
* ರೈತರ ಸಾಲ ಮನ್ನಾ ಮಾಡಲು ಕ್ರಮ
* ರಾಮಸೇತು ರಕ್ಷಣೆಗೂ ಬದ್ಧ
* ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ. 33 ಮೀಸಲು ನೀಡಲು ಸಿದ್ಧ
* ಹಿರಿಯ ನಾಗರಿಕರಿಗೆ ತೆರಿಗೆ ವಿನಾಯತಿ
* ದೇಶಾದ್ಯಂತ ಬಾಲಲಕ್ಷ್ಮಿ ಯೋಜನೆ
* ಬಡವರಿಗೆ ಶೇ.4 ಬಡ್ಡಿದರದಲ್ಲಿ ಸಾಲ
* ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು 35 ಕೆಜಿ ಅಕ್ಕಿ
* ಸೇನೆ, ಅರೆಸೇನಾಪಡೆ ಸಿಬ್ಬಂದಿಗೂ ತೆರಿಗೆ ವಿನಾಯಿತಿ
* ಐಟಿ ಕ್ಷೇತ್ರದಲ್ಲಿ ಹೊಸ 1.2 ಕೋಟಿ ಉದ್ಯೋಗ ಸೃಷ್ಟಿಗೆ ಕ್ರಮ
* ಕಂಪ್ಯೂಟರ್ ಉಪಕರಣಗಳ ದರ ಕಡಿತ
* ಪಿಂಚಣಿ ಮೇಲಿನ ತೆರಿಗೆ ರದ್ದು
* ವಿದೇಶದಲ್ಲಿರುವ ಅಕ್ರಮ ಹಣ ಹಿಂಪಡೆಯಲು ಕ್ರಮ
* ಸೇನಾಪಡೆಗಳ ಸಿಬ್ಬಂದಿಗಳ ವೇತನ ಏರಿಕೆ ವಿಶೇಷ ಆಯೋಗ ರಚನೆ
* ಉಲ್ಫಾ ಉಗ್ರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
* ಬಿಪಿಎಲ್ ವಿದ್ಯಾರ್ಥಿಗಳ ಉಚಿತ ಸೈಕಲ್ ವಿತರಣೆ
(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications