'ಜಾನಪದ ಕೋಗಿಲೆ' ಸಿರಿಯಜ್ಜಿ ನಿಧನ, ಗಣ್ಯರ ಶೋಕ
ಬೆಂಗಳೂರು, ಏ. 3 : ಜಾನಪದ ಸಿರಿ ಖ್ಯಾತಿಯ, ನಾಡೋಜ ಪ್ರಶಸ್ತಿ ಪುರಸ್ಕೃತ ಸಿರಿಯಜ್ಜಿ (97) ಚಳ್ಳಕೆರೆ ತಾಲೂಕು ಯಾದಲಗಟ್ಟೆ ಗೊಲ್ಲರಹಟ್ಟಿಯಲ್ಲಿ ತೀವ್ರ ಅನಾರೋಗ್ಯದಿಂದ ಗುರುವಾರ ನಿಧನರಾದರು. ಸಿರಿಯಜ್ಜಿ ಅಂತ್ಯಸಂಸ್ಕಾರ ತೋಟದ ಮನೆ ಯಲ್ಲಿ ಶುಕ್ರವಾರ ಬೆಳಗ್ಗೆ ನಡೆಯಲಿದೆ. ಸಾವಿರಕ್ಕೂ ಹೆಚ್ಚು ಜಾನಪದ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡುತ್ತಿದ್ದ ಸಿರಿಯಜ್ಜಿ ನಿಜಕ್ಕೂ ಜಾನಪದ ಲೋಕದ ಸಿರಿಯಾಗಿದ್ದರು.
ಕನ್ನಡ ಜಾನಪದ ಲೋಕದ ಹಿರಿಯ ಗಾಯಕಿಯಾದ ಸಿರಿಯಜ್ಜಿ ಅವರ ನಿಧನ ಸುದ್ದಿ ತಿಳಿದು ತೀವ್ರ ದು:ಖವಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಲ್ಲೂರು ಪ್ರಸಾದ್ ಆರ್. ಕೆ. ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
'ಜಾನಪದ ಕೋಗಿಲೆ' ಎಂದೇ ಖ್ಯಾತರಾಗಿರುವ ಸಿರಿಯಜ್ಜಿ ಅವರು ತಮ್ಮ ಮಧುರ ಕಂಠದಿಂದ ಸಹಸ್ರಾರು ಜಾನಪದ ಹಾಡುಗಳನ್ನು ಹಾಡಿ ಜನರನ್ನು ರಂಜಿಸುತ್ತಿದ್ದರು. ಇವರ ಕಂಠ ಮಾಧುರ್ಯಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿತ್ತು.
ಸಿರಿಯಜ್ಜಿ ಅವರ ನಿಧನದಿಂದ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ಅವರ ಕಟುಂಬ ವರ್ಗಕ್ಕೂ ಅವರ ಅಭಿಮಾನಿ ವರ್ಗಕ್ಕೂ ಅವರ ನಿಧನದಿಂದ ಉಂಟಾದ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತನ್ನು ನೀಡಲೆಂದು ಆಶಿಸುತ್ತೇನೆಂದು ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications