ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ
ಎಲ್ಲಾ ರಾಷ್ಟ್ರೀಯ ಪಕ್ಷಗಳು ಹಾಗೂ ಈವರೆಗೂ ಆರಿಸಿ ಬ೦ದ ಸಂಸದರು ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು, ನಾಡಿನ ಕವಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಿನಿಮಾ ನಟರ ಮನೆಗೆ ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡುವುದಾಗಿ ವಾಟಾಳ್ ಹೇಳಿದ್ದಾರೆ. ರಾಜ್ಯಾದ್ಯಂತ ಒಟ್ಟು 6 ಕಡೆ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳನ್ನು ನಿಲ್ಲಿಸಬೇಕೆಂದು ನಿರ್ಧರಿಸಿದ್ದೇವೆ.
ಬೆ೦ಗಳೂರು ಸೆಂಟ್ರಲ್ ಕ್ಷೇತ್ರದಿಂದ ಕನ್ನಡ ವೇದಿಕೆಯ ಪ್ರಭಾಕರ ರೆಡ್ಡಿ, ಬೆಂಗಳೂರು ಗ್ರಾಮಾಂತರದಿ೦ದ ಕರವೇಯ ಇನ್ನೊಂದು ಬಣದ ಅಧ್ಯಕ್ಷ ಶಿವರಾಮೇಗೌಡ ಸ್ಪರ್ಧಿಸಲಿದ್ದಾರೆ. ಚಾಮರಾಜನಗರ, ಬೆಂಗಳೂರು ಉತ್ತರ ಮತ್ತು ಬೆಳಗಾವಿಯಲ್ಲಿ ಮುಂದಿನ ದಿನದಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ವಾಟಾಳ್ ತಿಳಿಸಿದರು.
ಈ ಸಂದರ್ಭದಲ್ಲಿ ಸ್ವಾಭಿಮಾನಿ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್, ಸಮಾಜವಾದಿ ಪಕ್ಷದ ಮಹಿಳಾ ಘಟಕದ ನಾಯಕಿ ಬಿ ಟಿ ಲಲಿತಾನಾಯಕ್, ಕರವೇ ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು. ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ಬಿಜೆಪಿಯ ಅನಂತ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿ ಕ್ಯಾಪ್ಟನ್ ಗೋಪಿನಾಥ್ ವಿರುದ್ದ ವಾಟಾಳ್ ನಾಗರಾಜ್ ಸೆಣಸಲಿದ್ದಾರೆ.
(ದಟ್ಸ್
ಕನ್ನಡ
ವಾರ್ತೆ)
ಕನ್ನಡ
ಪರ
ಸಂಘಟನೆಗಳು
ಒಂದಾಗಿ
ಕಣಕ್ಕೆ
ಲೋಕಸಭೆ
ಚುನಾವಣೆ
2009
ತಾಜಾ
ಸುದ್ದಿಗಳು