ಟಿವಿ 9ಗೆ ರಾಮನಾಥ ಗೋಯಂಕಾ ಪ್ರಶಸ್ತಿ ಘೋಷಣೆ
ಬೆಂಗಳೂರು, ಏ. 3 : ಅತೀ ಕಡಿಮೆ ಅವಧಿಯಲ್ಲಿ ತಾಜಾ ಸುದ್ದಿಗಳನ್ನು ಪ್ರಸಾರ ಮಾಡುತ್ತ ಕನ್ನಡಿಗರ ಮನೆಮಾತಾಗಿರುವ ಟಿವಿ 9 ಕನ್ನಡ ವಾರ್ತಾವಾಹಿನಿಗೆ ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿ ಎಂದೇ ಪರಿಗಣಿಲ್ಪಟ್ಟಿರುವ ರಾಮನಾಥ್ ಗೋಯಂಕಾ ಪ್ರಶಸ್ತಿ ಲಭಿಸಿದೆ. ಪತ್ರಕರ್ತ ಎಂ ಎಸ್ ರಾಘವೇಂದ್ರ ನೇತೃತ್ವದ "ವಾರೆಂಟ್ " ಕಾರ್ಯಕ್ರಮದ ತನಿಖೆ ವರದಿಗೆ ಈ ಪ್ರಶಸ್ತಿ ಲಭಿಸಿದೆ.
ಹುಬ್ಬಳ್ಳಿಯಲ್ಲಿ ಅವ್ಯಾಹತವಾಗಿ ನಡೆದಿದ್ದ ಮಹಿಳೆಯರ ಮಾರಾಟ ಜಾಲವನ್ನು ಪತ್ತೆ ಹಚ್ಚಿ ವರದಿ ಮಾಡಿದ್ದಕ್ಕೆ ಅತ್ಯುತ್ತಮ ಪ್ರಾದೇಶಿಕ ವಾಹಿನಿ ಪ್ರಶಸ್ತಿ ಎಂಬ ಪ್ರಶಸ್ತಿಯನ್ನು ಟಿವಿ9 ಮುಡಿಗೇರಿಸಿಕೊಂಡಿದೆ. ಜೊತೆಗೆ ತೆಲುಗು ಟಿವಿ 9 ವಾರ್ತಾವಾಹಿನಿಗೂ 'ನವೀನ' ಎಂಬ ಮಹಿಳೆ ಕಾರ್ಯಕ್ರಮಕ್ಕೆ ಪ್ರಶಸ್ತಿ ಗೋಯಂಕಾ ಪ್ರಶಸ್ತಿ ಸಿಕ್ಕಿದೆ.
ಪತ್ರಿಕೋದ್ಯಮದ ದಿಗ್ಗಜ ಎಂದೇ ಖ್ಯಾತಿಯಾಗಿರುವ ರಾಮನಾಥ ಗೋಯಂಕಾ ಅವರ ಹೆಸರಿನಲ್ಲಿ ಪತ್ರಿಕೋದ್ಯಮದಲ್ಲಿ ಗಮನಾರ್ಹ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಗೋಯಂಕಾ ಬಿಹಾರದ ಧರ್ಬಾಂಗ್ ಜಿಲ್ಲೆಯವರು. ನಂತರ ಚೈನ್ನೈನಲ್ಲಿ ಬಂದು ನೆಲೆಸಿದರು. ತಮ್ಮ ಒಡೆತನದಲ್ಲಿ ಇಂಡಿಯನ್ ಎಕ್ಸ್ ಪ್ರೆಸ್ ಎಂಬ ಇಂಗ್ಲಿಷ್ ದೈನಿಕಯನ್ನು ಹೊರತಂದರು.
ನಂತರ ದಿನಗಳಲ್ಲಿ ಪ್ರಾದೇಶಿಕ ಭಾಷೆಯ ಪತ್ರಿಕೆಗಳು ಹೊರತಂದಿರುವುದು ಇವರ ಹೆಗ್ಗಳಿಕೆ. ಇಂದಿಗೂ ಕೂಡಾ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ಗೋಯಂಕಾ ಒಡೆತನದ ಪತ್ರಿಕೆಗಳು ಜನಸಾಮಾನ್ಯರ ಜೀವನಾಡಿಯಾಗಿವೆ. ಶ್ರೇಷ್ಠ ಪತ್ರಕರ್ತರಾಗಿದ್ದ ರಾಮನಾಥ್ ಗೋಯಂಕಾ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಅವರು ವಿರುದ್ಧ ಸೆಡ್ಡು ನಿಂತವರಲ್ಲಿ ಇವರು ಒಬ್ಬರು. ಧೀರೂಭಾಯಿ ಅಂಬಾನಿ ಅವರ ಆಪ್ತರಾಗಿದ್ದ ಗೋಯೆಂಕಾ ನಂತರ ಅವರ ಕಂಪೆನಿ ವಿರುದ್ಧ ಹರಿತವಾಗಿ ಲೇಖನ ಬರೆದವರು. ಉತ್ತಮ ವಾಗ್ಮಿಗಳಾಗಿದ್ದ ಅವರು ರಾಮಮನೋಹರ್ ಲೋಹಿಯಾ, ಜಯಪ್ರಕಾಶ ನಾರಾಯಣ ಅವರಂಥ ಮಹನೀಯರ ನಿಕಟವರ್ತಿಗಳಾಗಿದ್ದರು.
ಜನಸಂಘದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಗೋಯಂಕಾ ಅವರು 1971ರಲ್ಲಿ ಮಧ್ಯಪ್ರದೇಶದ ವಿದಿಶಾ ಲೋಕಸಭೆ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು. ಇದೀಗ ವಿದಿಶಾ ಕ್ಷೇತ್ರದಿಂದ ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಸುಷ್ಮಾ ಸ್ವರಾಜ್ ಕಣಕ್ಕಿಳಿಯಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications