Get Updates
Get notified of breaking news, exclusive insights, and must-see stories!

ಹಿರಿಯ ಗಾಂಧಿವಾದಿ ಹಾರ್ನಹಳ್ಳಿ ರಾಮಸ್ವಾಮಿ ನಿಧನ

Veteran Gandhian Harnahalli Ramaswamy passes away
ಬೆಂಗಳೂರು, ಏ. 4 : ಗಾಂಧಿವಾದಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಹಾರ್ನಹಳ್ಳಿ ರಾಮಸ್ವಾಮಿ (87) ಅವರು ದೀರ್ಷಕಾಲದ ಅಸ್ವಸ್ಥತೆಯಿಂದ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ದಿನಪತ್ರಿಕೆ ಸಂಯುಕ್ತ ಕರ್ನಾಟಕವನ್ನು ಪ್ರಕಟಿಸುತ್ತಿರುವ ಲೋಕ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರು ಹಾಸನದಲ್ಲಿರುವ ಮಲನಾಡ್ ಶಿಕ್ಷಣ ಸಂಸ್ಥೆಯಲ್ಲಿಯೂ ಸೇವೆ ಸಲ್ಲಿಸಿದ್ದರು. ಹಾರ್ನಹಳ್ಳಿ ರಾಮಸ್ವಾಮಿಯವರು ವೀರಪ್ಪ ಮೋಯ್ಲಿ ಸರಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ದುಡಿದಿದ್ದರು. ಎಸ್ಎಮ್ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ರಾಮಸ್ವಾಮಿಯವರು ನ್ಯಾಯವಾದಿ ಅಶೋಕ್ ಹಾರ್ನಹಳ್ಳಿ ಸೇರಿದಂತೆ ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಗಾಂಧಿವಾದಿ ಹಾರ್ನಹಳ್ಳಿ ರಾಮಸ್ವಾಮಿಯವರ ನಿಧನಕ್ಕೆ ತೀವ್ರ ಸಂಪಾತ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರೂ ರಾಮಸ್ವಾಮಿ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

(ಏಜೆನ್ಸೀಸ್)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+