ಏ.8 ರಂದು 61ನೇ ವಿಶ್ವ ಆರೋಗ್ಯ ದಿನಾಚರಣೆ
ಬೆಂಗಳೂರು, ಏ.4: ವಿಶ್ವ ಆರೋಗ್ಯ ಸಂಸ್ಥೆ ಹಾಗೂ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಮತ್ತು ಕರ್ನಾಟಕ ಸರ್ಕಾರ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಶಿಕ್ಷಕರ ಸದನದಲ್ಲಿ 61ನೇ ವಿಶ್ವ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಂಡಿದೆ.
ರಾಜ್ಯದ ಮುಖ್ಯಕಾರ್ಯದರ್ಶಿ ಸುಧಾಕರ ರಾವ್ ಅವರು ಈ ಕಾರ್ಯಕ್ರಮವನ್ನು ಉದ್ಫಾಟಿಸಲಿದ್ದಾರೆ.ಬೆಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಡಾ: ಎನ್. ಪ್ರಭುದೇವ್ ಹಾಗೂ ಟೋರ್ಸ್ವೀಲ್ ರಿಸರ್ಚ್ ಫೌಂಡೇಷನ್ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಡಾ ಸಿ.ಎಸ್. ವಿಶ್ವನಾಥ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications