ಹಾರ್ನಹಳ್ಳಿ ರಾಮಸ್ವಾಮಿ ನಿಧನಕ್ಕೆ ಗಣ್ಯರ ಶೋಕ

Harnahalli Ramaswamy
ಬೆಂಗಳೂರು, ಏ.5: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ,ಶಿಕ್ಷಣ ತಜ್ಞ, ಮಾಜಿ ಸಚಿವ ಹಾರ್ನಹಳ್ಳಿ ರಾಮಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗೃಹ ಸಚಿವ ಡಾ ವಿ.ಎಸ್. ಆಚಾರ್ಯ, ಅಬಕಾರಿ, ಐ.ಟಿ. ಬಿ.ಟಿ. ಬೆಂಗಳೂರು ಜಲ ಮಂಡಳಿ ಹಾಗೂ ವಾರ್ತಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಕೃಷಿ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವರಾಜ್. ಎಸ್. ತಂಗಡಗಿ, ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮುಖ್ಯಮಂತ್ರಿಯವರ ಸಲಹೆಗಾರ ಕೆ. ದಿವಾಕರ ಅವರೂ ಸೇರಿದಂತೆ ಹಲವು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಸಂದೇಶದಲ್ಲಿ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ರಾಮಸ್ವಾಮಿ ಅವರು ಕಾನೂನು, ಶಿಕ್ಷಣ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲೂ ಅಪಾರ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ನಾಡಿಗೆ ನಷ್ಟವಾಗಿದೆ. ಭಗವಂ ಅವರ ಆತ್ಮಕ್ಕೆ ಶಾಂತಿಯನ್ನು ಹಾಗೂ ಅವರ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.

ಗೃಹ ಸಚಿವ ಡಾ ವಿ.ಎಸ್. ಆಚಾರ್ಯ ಅವರು ತಮ್ಮ ಶೋಕ ಸಂದೇಶದಲ್ಲಿ ಹಾರ್‍ನಹಳ್ಳಿ ರಾಮಸ್ವಾಮಿಅವರು ಒಬ್ಬ ನುರಿತ ರಾಜಕಾರಣಿಯಾಗಿದ್ದು, ಆನೇಕ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶ್ರೀಯುತರ ಅಗಲಿಕೆಯಿಂದ ನಮ್ಮ ರಾಜ್ಯಕ್ಕೆ ಹಾಗೂ ಅದರಲ್ಲೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ಗಾಂಧಿವಾದಿ ಹಾರ್ನಹಳ್ಳಿ ರಾಮಸ್ವಾಮಿ ನಿಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+