ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

Kagodu Timmappa
ಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ.

ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ ಮಾತನಾಡುವವರ ಕೈ ಕಡಿಯಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕಾಗೋಡು ತಿಮ್ಮಪ್ಪ ಮೇಲಿದೆ. ಕಾಗೋಡು ಹೇಳಿಕೆ ಕೋಮುದ್ವೇಷಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಬಂಧಿಸಬೇಕೆಂದು ಬಿಜೆಪಿಯ ಮಾಜಿ ಎಂಎಲ್ ಸಿ ಬಾಲಕೃಷ್ಣ ಭಟ್ ಶುಕ್ರವಾರ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಕಾಗೋಡು ಹೇಳಿಕೆ ಕೇಳಿದ್ದಾಗಿ ಹಿಂದೂ ಸಂಘಟನೆಯ ಮನೋಜ್ ಪೂಜಾರಿ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದರು. ಇದರ ಹೊರತಾಗಿ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿದ ಸಿಡಿಯನ್ನು ವೀಕ್ಷಿಸಿದ ನ್ಯಾಯಾಧೀಶರು ಕಾಗೋಡು ವಿರುದ್ಧ ಆರೋಪಗಳು ಸಾಬೀತಾಗಿದೆ ಎಂದು ಪರಿಗಣಿಸಿ ತನಿಖೆ ನಡೆಸಲು ಪೊಲೀಸರಿಗೆ ಆದೇಶ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+