ಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು

ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ ಮಾತನಾಡುವವರ ಕೈ ಕಡಿಯಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕಾಗೋಡು ತಿಮ್ಮಪ್ಪ ಮೇಲಿದೆ. ಕಾಗೋಡು ಹೇಳಿಕೆ ಕೋಮುದ್ವೇಷಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಬಂಧಿಸಬೇಕೆಂದು ಬಿಜೆಪಿಯ ಮಾಜಿ ಎಂಎಲ್ ಸಿ ಬಾಲಕೃಷ್ಣ ಭಟ್ ಶುಕ್ರವಾರ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಕಾಗೋಡು ಹೇಳಿಕೆ ಕೇಳಿದ್ದಾಗಿ ಹಿಂದೂ ಸಂಘಟನೆಯ ಮನೋಜ್ ಪೂಜಾರಿ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದರು. ಇದರ ಹೊರತಾಗಿ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿದ ಸಿಡಿಯನ್ನು ವೀಕ್ಷಿಸಿದ ನ್ಯಾಯಾಧೀಶರು ಕಾಗೋಡು ವಿರುದ್ಧ ಆರೋಪಗಳು ಸಾಬೀತಾಗಿದೆ ಎಂದು ಪರಿಗಣಿಸಿ ತನಿಖೆ ನಡೆಸಲು ಪೊಲೀಸರಿಗೆ ಆದೇಶ ನೀಡಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications